ರಾಜಕೀಯ

ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರ ಪರೇಡ್, ಬಳಿಕ ರೆಸಾರ್ಟ್ ಗೆ

Lingaraj Badiger
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ಸರ್ಕಾರ ರಚಿಸಲು ನಮ್ಮ ಬಳಿ ಅಗತ್ಯ ಸಂಖ್ಯಾಬಲ ಇದೆ. ಹೀಗಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅ
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಹ ರಾಜಭವನಕ್ಕೆ ತೆರಳುತ್ತಿದ್ದು, ಕೆಪಿಸಿಸಿ ಕಚೇರಿಯಿಂದ ಖಾಸಗಿ ಬಸ್‌ ಮೂಲಕ ಶಾಸಕರನ್ನು  ಮೊದಲು ರಾಜಭವನದಕ್ಕೆ ಕರೆದೊಯ್ಯಲಾಗುತ್ತಿದೆ. 
ಸಂಜೆ 5 ಗಂಟೆಗೆ ರಾಜ್ಯಪಾಲರು ಭೇಟಿಗೆ ಸಮಯ ನೀಡಲಾಗಿದ್ದು, ಕಾಂಗ್ರೆಸ್ - ಜೆಡಿಎಸ್ ನಾಯಕರು ವಜುಭಾಯಿ ವಾಲಾ ಅವರಿಗೆ ಶಾಸಕರ ಬೆಂಬಲ ಪತ್ರ ನೀಡಿ, ರಾಜ್ಯಪಾಲರ ಎದುರು ಪರೇಡ್‌ ನಡೆಸಲಿದ್ದಾರೆ. ಬಳಿಕ ರೆಸಾರ್ಟ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ ಅವರಿಗೆ ಶಾಸಕರನ್ನು ರೆಸಾರ್ಟ್‌ಗೆ ತಲುಪಿಸುವ ಜವಾಬ್ದಾರಿ ವಹಿಸಲಾಗಿದೆ.
SCROLL FOR NEXT