ರಾಜ್ಯಪಾಲ ವಜುಭಾಯಿ ವಾಲಾ 
ರಾಜಕೀಯ

ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರ ಪರೇಡ್, ಬಳಿಕ ರೆಸಾರ್ಟ್ ಗೆ

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ...

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ಸರ್ಕಾರ ರಚಿಸಲು ನಮ್ಮ ಬಳಿ ಅಗತ್ಯ ಸಂಖ್ಯಾಬಲ ಇದೆ. ಹೀಗಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅ
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಹ ರಾಜಭವನಕ್ಕೆ ತೆರಳುತ್ತಿದ್ದು, ಕೆಪಿಸಿಸಿ ಕಚೇರಿಯಿಂದ ಖಾಸಗಿ ಬಸ್‌ ಮೂಲಕ ಶಾಸಕರನ್ನು  ಮೊದಲು ರಾಜಭವನದಕ್ಕೆ ಕರೆದೊಯ್ಯಲಾಗುತ್ತಿದೆ. 
ಸಂಜೆ 5 ಗಂಟೆಗೆ ರಾಜ್ಯಪಾಲರು ಭೇಟಿಗೆ ಸಮಯ ನೀಡಲಾಗಿದ್ದು, ಕಾಂಗ್ರೆಸ್ - ಜೆಡಿಎಸ್ ನಾಯಕರು ವಜುಭಾಯಿ ವಾಲಾ ಅವರಿಗೆ ಶಾಸಕರ ಬೆಂಬಲ ಪತ್ರ ನೀಡಿ, ರಾಜ್ಯಪಾಲರ ಎದುರು ಪರೇಡ್‌ ನಡೆಸಲಿದ್ದಾರೆ. ಬಳಿಕ ರೆಸಾರ್ಟ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ ಅವರಿಗೆ ಶಾಸಕರನ್ನು ರೆಸಾರ್ಟ್‌ಗೆ ತಲುಪಿಸುವ ಜವಾಬ್ದಾರಿ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT