ರಂದೀಪ್ ಸುರ್ಜೇವಾಲ 
ರಾಜಕೀಯ

ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಕೋರ್ಟ್ ಮೊರೆ ಹೋಗಲು ಮುಂದಾದ ಕಾಂಗ್ರೆಸ್

ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ....

ನವದೆಹಲಿ: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯಪಾಲರು ಸಂಪ್ರದಾಯ, ಸಂವಿಧಾನ ಮತ್ತು ಕಾನೂನಿನ ಪ್ರಕಾರ ಸಂಖ್ಯಾಬಲವನ್ನು ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಗೆ ಸರ್ಕಾರ ರಚನೆಗೆ ಆಹ್ವಾನ ನೀಡದಿದ್ದರೆ ಕೋರ್ಟ್ ಮೊರೆ ಹೋಗಲು ಪಕ್ಷ ಸಿದ್ಧತೆ ನಡೆಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಸಂಖ್ಯಾಬಲ ಮತ್ತು ಒಟ್ಟು ಮತ ಹಂಚಿಕೆ ಆಧಾರದ ಮೇಲೆ ನಾವು ಸರ್ಕಾರ ರಚನೆಯೆ ಹಕ್ಕು ಮಂಡಿಸಿದ್ದೇವೆ. ಒಂದು ವೇಳೆ ಆಹ್ವಾನ ನೀಡಿದೆ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದರೆ ಕಾಂಗ್ರೆಸ್ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿದೆ ಎಂದು ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೇವಾಲ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. 38 ಸ್ಥಾನ ಪಡೆದು ಮೂರನೇ ಸ್ಥಾನದಲ್ಲಿರುವ ಜೆಡಿಎಸ್ ಗೆ 78 ಸ್ಥಾನ ಗೆದ್ದ ಕಾಂಗ್ರೆಸ್ ಬೆಂಬಲ ಸೂಚಿಸಿದೆ. ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿ 104 ಸ್ಥಾನಗಳೊಂದಿಗೆ ಸರ್ಕಾರ ರಚನೆಗೆ ತೀವ್ರ ಸರ್ಕಸ್ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT