ಚಂದ್ರಶೇಖರ್ ರಾವ್ 
ರಾಜಕೀಯ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ರಾಷ್ಟ್ರೀಯ ಮಟ್ಟದಲ್ಲಿ ಟಿಆರ್‌ಎಸ್‌ನ ತೃತೀಯ ರಂಗ ರಚನೆಗೆ ತೊಡಕಾಗುತ್ತಾ?!

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೂ ಬಿಜೆಪಿಗೆ ಜನತೆ ಹೆಚ್ಚು ಸ್ಥಾನಗಳನ್ನು...

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೂ ಬಿಜೆಪಿಗೆ ಜನತೆ ಹೆಚ್ಚು ಸ್ಥಾನಗಳನ್ನು ನೀಡಿರುವುದು ನೆರೆಯ ರಾಜ್ಯ ತೆಲಂಗಾಣಕ್ಕೆ ಕೊಂಚ ಆತಂಕ ಉಂಟು ಮಾಡಿದ್ದರು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಜೆಡಿಎಸ್ ಅನ್ನು ಬೆಂಬಲಿಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸೇತ್ತರ ಹಾಗೂ ಬಿಜೆಪಿಯೇತ್ತರ ತೃತೀಯ ರಂಗ ರಚನೆಗೆ ಮುಂದಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಟಿಆರ್ಎಸ್ ಚಂದ್ರಶೇಖರ್ ರಾವ್ ಅವರ ಯೋಜನೆಗೆ ತೊಡಕಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ವಿಫಲವಾಗಿರುವುದು ಟಿಆರ್ಎಸ್ ಪಕ್ಷಕ್ಕೆ ಖುಷಿಯ ವಿಚಾರವಾಗಿದೆ. ಒಂದು ವೇಳೆ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದರೆ ಅದು ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ನೈತಿಕತೆಯನ್ನು ಹೆಚ್ಚಿಸಲಿತ್ತು. ಆದರೆ ಆಗಾಗಲಿಲ್ಲ ಎಂಬುದು ಮುಖ್ಯ.
ಇನ್ನು ಕಾಂಗ್ರೆಸ್ ಬೆಂಬಲ ಪಡೆದಿರುವ ಜೆಡಿಎಸ್ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನಿರ್ಧಾರ ಕೇಂದ್ರದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಚುಕ್ಕಾಣಿಯನ್ನು ಜೆಡಿಎಸ್ ಹಿಡಿಯಲಿದೆ ಎಂಬ ಸೂಚನೆಯನ್ನು ನೀಡಿದಂತಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೂ ಮುನ್ನ ಬೆಂಗಳೂರಿಗೆ ಆಗಮಿಸಿದ್ದ ಚಂದ್ರಶೇಖರ್ ರಾವ್ ಅವರು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಮತ್ತು ಪುತ್ರ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತೃತೀಯ ರಂಗ ರಚನೆಗೆ ಬೆಂಬಲಿಸುವಂತೆ ಕೋರಿದ್ದರು. 
ಈ ವೇಳೆ ಚಂದ್ರಶೇಖರ್ ರಾವ್ ಕರ್ನಾಟಕದಲ್ಲಿರುವ ತೆಲುಗು ಭಾಷಿಕರಿಗೆ ಜೆಡಿಎಸ್ ಗೆ ಮತ ನೀಡಿ ಬಹುಮತದೊಂದಿಗೆ ಗೆಲ್ಲಿಸುವಂತೆ ಮನವಿ ಸಹ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT