ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ರಾಜ್ಯದ ಜನತೆ ಬಿಜೆಪಿ ಸರ್ಕಾರ ಬಯಸಿದ್ದಾರೆ, ಯಾರೇನೇ ಮಾಡಿದರೂ ಜನತೆ ನಮ್ಮೊಂದಿದ್ದಾರೆ: ಬಿಜೆಪಿ

ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ...

ಬೆಂಗಳೂರು: ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ಯಾರು ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿ ಮಾಡಿದರೂ, ಕರ್ನಾಟಕದ ಜನತೆ ನಮ್ಮೊಂದಿಗಿದ್ದಾರೆ. ಸಭೆ ಬಳಿಕ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಹಿಂಬಾಗಿಲಿನಿಂದ ಕಾಂಗ್ರೆಸ್ ಮಾಡಿದ ಪ್ರವೇಶ ಸರಿಯಲ್ಲ ಎಂದು ಹೇಳಿದ್ದಾರೆ. 
ಇದರಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕರನ್ನು ಆಯ್ಕೆ ಮಾಡಲಾಗುತ್ತಿದೆ. ಇದಾದ ಬಳಿಕ ಕೂಡಲೇ ರಾಜಭವನಕ್ಕೆ ತೆರಳಲಾಗುತ್ತದೆ. ರಾಜ್ಯಪಾಲರ ಭೇಟಿ ವೇಳೆ ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಮೊದಲು ಅವಕಾಶ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ಬಹುಮತ ಸಾಬೀತುಪಡಿಸಲು ನಾಳೆಯವರೆಗೂ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ಹೇಳಿದ್ದಾರೆ. 
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ನಮ್ಮದು ಏಕೈಕ ಅತೀದೊಡ್ಡ ಪಕ್ಷವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ 6 ತಿಂಗಳ ಹಿಂದೆ ಹೇಗೆ ಹೊಡೆದಾಡುತ್ತಿದೆ ಎಂಬುದನ್ನು ನೀವು ನೋಡಿರಬಹುದು. ಇದೀಗ ಇಬ್ಬರು ಒಂದಾಗಿ, ಸರ್ಕಾರ ರಚಿಸಲು ಹೊರಟಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video