ಕಾಂಗ್ರೆಸ್ ಧ್ವಜ 
ರಾಜಕೀಯ

ಕರ್ನಾಟಕ: ಕಾಂಗ್ರೆಸ್ ಗೆ ಹೆಚ್ಚಿನ ಮತ ಪಾಲು, ಆದರೂ ಚುನಾವಣೆಯಲ್ಲಿ ಸೋಲು!

ಬಿಜೆಪಿ 104 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಶೇಕಡವಾರು ಮತಗಳಿಕೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಶೇ.38 ರಷ್ಟು ಮತಗಳನ್ನು ಪಡೆದುಕೊಂಡಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವೊಂದು ರಾಜಕೀಯ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯದೆ ಬಿಜೆಪಿ 104 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಶೇಕಡವಾರು ಮತಗಳಿಕೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಶೇ.38 ರಷ್ಟು ಮತಗಳನ್ನು ಪಡೆದುಕೊಂಡಿದೆ.

ಬಿಜೆಪಿಯ ಶೇಕಡವಾರು ಮತಗಳಿಕೆ ಶೇ.32 ರಷ್ಟು ಆಗಿದೆ.  ಕಾಂಗ್ರೆಸ್   ಪರ 1 ಕೋಟಿ 38 ಲಕ್ಷ ಸಾವಿರದ 2015 ಮಂದಿ ಮತ ಚಲಾಯಿಸಿದ್ದರೆ , ಬಿಜೆಪಿಯ ಪರ 1 ಕೋಟಿ 31 ಲಕ್ಷದ 59 ಸಾವಿರದ 117 ಮಂದಿ ಮತ ಚಲಾಯಿಸಿದ್ದಾರೆ. 78 ಸ್ಥಾನಗಳನ್ನು ಗೆದ್ದಿದ್ದರೂ  ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ  ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿದೆ.

ಬಿಜೆಪಿಗಿಂತಲೂ ಕಡಿಮೆ ಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತ ಪಡೆದುಕೊಂಡಿದೆ. ಹಲವು ಸ್ಥಾನಗಳಲ್ಲಿ, ಕಾಂಗ್ರೆಸ್ ಜೆಡಿಯು (ಎಸ್) ಯೊಂದಿಗೆ ನೇರ ಸ್ಪರ್ಧೆಯಲ್ಲಿತ್ತು,  ಅಲ್ಲಿ ಬಿಜೆಪಿ ಅಸ್ತಿತ್ವವೇ ಇರಲಿಲ್ಲ.  ಬಿಜೆಪಿ, ಕಾಂಗ್ರೆಸ್ ಸ್ಪರ್ಧೆ ಇದ್ದ ಕಡೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಲಾಭವಾಗಿದೆ.

ಕಾಂಗ್ರೆಸ್  ಮತ್ತಿತರ ಪಕ್ಷಗಳ ನಡುವೆ ಮತಗಳು ಚದುರಿ ಹೋಗಿದ್ದರೂ , ಹಳೆಯ ಪಕ್ಷಕ್ಕೆ ದೊಡ್ಡ ಪ್ರಮಾಣದ  ಮತಗಳು ಬಿದ್ದಿವೆ. ಬಿಜೆಪಿಗೆ ಹೋಲಿಸಿದ್ದರೆ  ಹಳೆ ಮೈಸೂರು ಭಾಗದಲ್ಲಿ ನೈಜ ಪ್ರಮಾಣದ ಮತಗಳಿಕೆಯಾಗಿಲ್ಲ. ಜೆಡಿಎಸ್  ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಜ್ಜೆ ಇಟ್ಟಕ್ಕೂ ಸಹ ಆಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ವಲಯದಲ್ಲಿಯೂ ಮತಗಳಿಕೆಯಲ್ಲಿ ಹೆಚ್ಚಾಗಿದೆ. ಆದರೆ, ಇದು ಸ್ಥಾನಗಳಾಗಿ ಬದಲಾಗಿಲ್ಲ.

 ಬಿಜೆಪಿ ಬೆಂಗಳೂರು ನಗರ, ಮಧ್ಯ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ಜೆಡಿಎಸ್  ಹಳೇ ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮತವನ್ನು ಪಡೆಯುವಲ್ಲಿ ಯಶಸ್ವಿಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT