ಸಿದ್ದರಾಮಯ್ಯ 
ರಾಜಕೀಯ

ಸಂವಿಧಾನದ ವಿರುದ್ಧ ಬಿಜೆಪಿ ನಡೆ ಕುರಿತು ಜನರಿಗೆ ಹೇಳುತ್ತೇವೆ: ಸಿದ್ದರಾಮಯ್ಯ

ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಬೆಂಗಳೂರು: ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. 
ಹಲವು ವಿರೋಧಗಳ ನಡುವೆ, ಸಾಕಷ್ಟು ಬೆಳವಣಿಗೆಗಳ ಬಳಿಕ ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಮುಖ್ಮಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದೆ. ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ. ಬಿಜೆಪಿಯ ಈ ಅಸಂವಿಧಾನಿಕ ನಡೆಯ ಕುರಿತು ಜನರ ಬಳಿ ಹೋಗಿ ವಿವರಿಸುತ್ತೇವೆಂದು ಹೇಳಿದ್ದಾರೆ. 
ಈ ನಡುವೆ ಆಪರೇಷನ್ ಕಮಲದ ಭೀತಿಯಿಂದಾಗಿ ಶಾಸಕರನ್ನು ಬಿಡದಿ ಬಳಿಯಿರುವ ಈಗಲ್ ಟನ್ ರೆಸಾರ್ಟ್'ನಲ್ಲಿ ಬಚ್ಚಿಟ್ಟಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಇದೀಗ ಹೊರಗೆ ಕರೆತಂದಿದ್ದು, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ನಗರದ ಗಾಂಧಿ ಪ್ರತಿಮೆ ಬಳಿ ಭಾರೀ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಇದೀಗ ಮುಂದಾಗಿವೆ ಎಂದು ತಿಳಿದುಬಂದಿದೆ. ಪ್ರತಿಭಟನೆಯಲ್ಲಿ ಜಿಎನ್. ಆಜಾದ್, ಅಶೋಕ್ ಗೆಲ್ಹೋಟ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್'ನ ವಿವಿಧ ನಾಯಕರು ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT