ಸಿದ್ದರಾಮಯ್ಯ 
ರಾಜಕೀಯ

ಸಂವಿಧಾನದ ವಿರುದ್ಧ ಬಿಜೆಪಿ ನಡೆ ಕುರಿತು ಜನರಿಗೆ ಹೇಳುತ್ತೇವೆ: ಸಿದ್ದರಾಮಯ್ಯ

ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಬೆಂಗಳೂರು: ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. 
ಹಲವು ವಿರೋಧಗಳ ನಡುವೆ, ಸಾಕಷ್ಟು ಬೆಳವಣಿಗೆಗಳ ಬಳಿಕ ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಮುಖ್ಮಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದೆ. ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ. ಬಿಜೆಪಿಯ ಈ ಅಸಂವಿಧಾನಿಕ ನಡೆಯ ಕುರಿತು ಜನರ ಬಳಿ ಹೋಗಿ ವಿವರಿಸುತ್ತೇವೆಂದು ಹೇಳಿದ್ದಾರೆ. 
ಈ ನಡುವೆ ಆಪರೇಷನ್ ಕಮಲದ ಭೀತಿಯಿಂದಾಗಿ ಶಾಸಕರನ್ನು ಬಿಡದಿ ಬಳಿಯಿರುವ ಈಗಲ್ ಟನ್ ರೆಸಾರ್ಟ್'ನಲ್ಲಿ ಬಚ್ಚಿಟ್ಟಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಇದೀಗ ಹೊರಗೆ ಕರೆತಂದಿದ್ದು, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ನಗರದ ಗಾಂಧಿ ಪ್ರತಿಮೆ ಬಳಿ ಭಾರೀ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಇದೀಗ ಮುಂದಾಗಿವೆ ಎಂದು ತಿಳಿದುಬಂದಿದೆ. ಪ್ರತಿಭಟನೆಯಲ್ಲಿ ಜಿಎನ್. ಆಜಾದ್, ಅಶೋಕ್ ಗೆಲ್ಹೋಟ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್'ನ ವಿವಿಧ ನಾಯಕರು ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT