ಪ್ರಮಾಣವಚನ ಸ್ವೀಕರಿಸುತ್ತಿರುವ ಕೆಜಿ ಬೋಪಯ್ಯ
ಬೆಂಗಳೂರು: ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಶುಕ್ರವಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೆಜಿ ಬೋಪಯ್ಯ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೋಪಯ್ಯ ಅವರ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಹಾಗೂ ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ.
ವಿಶ್ವಾಸ ಮತಯಾಚನೆಯನ್ನು ರಹಸ್ಯ ಮತದಾನದ ಮೂಲಕ ಮಾಡಬೇಕೆಂದು ಬಿಜೆಪಿ ಬಯಸಿತ್ತು. ಆದರೆ, ಸುಪ್ರೀಂ ಕೋರ್ಟ್ ತನ್ನ ಲಿಖಿತ ಆದೇಶದಲ್ಲಿ, ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ ರಹಸ್ಯ ಮತದಾನ ನಡೆಸಕೂಡದು ಎಂದು ಸೂಚಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos