ಜೆಡಿಎಸ್ ಬಂಡಾಯ ಶಾಸಕರು 
ರಾಜಕೀಯ

ಜೆಡಿಎಸ್‌ ಬಂಡಾಯ ಶಾಸಕರು ಅನರ್ಹತೆ ಭೀತಿಯಿಂದ ಪಾರು

2016ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಜೆಡಿಎಸ್ ಬಂಡಾಯ ಶಾಸಕರು...

ಬೆಂಗಳೂರು: 2016ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಜೆಡಿಎಸ್ ಬಂಡಾಯ ಶಾಸಕರು ಅನರ್ಹತೆ ಭೀತಿಯಿಂದ ಪಾರಾಗಿದ್ದಾರೆ.
ಏಳು ಜೆಡಿಎಸ್ ಶಾಸಕರ ಅನರ್ಹತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಿರ್ಗಮಿತ  ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಇಂದು ಬೆಳಗ್ಗೆ ವಜಾಗೊಳಿಸಿದ್ದಾರೆ.
ಮೇ 17 ರಂದೇ 14ನೇ ವಿಧಾನಸಭೆ ವಿಸರ್ಜನೆಯಾಗಿದೆ. ಹಾಗಾಗಿ ಶಾಸಕರ ಅನರ್ಹತೆ ಕೋರಿದ ಅರ್ಜಿಗೆ ಸಾಂವಿಧಾನಿಕ ಮೌಲ್ಯ ಇಲ್ಲ ಎಂದು ಹೇಳಿ ಕೆ.ಬಿ.ಕೋಳಿವಾಡ  ಅರ್ಜಿ ವಜಾ ಮಾಡಿದ್ದಾರೆ.
ಅಡ್ಡಮತದಾನ ಮಾಡಿದ್ದ ಏಳು ಶಾಸಕರ ಪೈಕಿ ಮೂರು ಮಂದಿ ಮರು ಆಯ್ಕೆಯಾಗಿದ್ದು, ಅವರು ಅನರ್ಹತೆ ಭೀತಿ ಎದುರಿಸುತ್ತಿದ್ದರು.
ಕೆ.ಬಿ.ಕೋಳಿವಾಡ ಅವರು ನೂತನ ಸ್ವೀಕರ್ ನೇಮಕವಾಗುವವರೆಗೆ ಸ್ಪೀಕರ್ ಆಗಿ ಇರುತ್ತಾರೆ. ಇಂದು ಮಧ್ಯಾಹ್ನ ಹಂಗಾಮಿ ಸ್ವೀಕರ್ ಆಗಿ ಕೆಜಿ ಬೋಪಯ್ಯ ಅವರು ನೇಮಕಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT