ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ನಾಡಿದ್ದು 22 ರಂದು ಬಿಜೆಪಿಯ ಸೋತ ಶಾಸಕರ ಸಭೆ: ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣೆಯಲ್ಲಿ ಸೋತ ಪಕ್ಷದ ಶಾಸಕರ ಜೊತೆ ಪರಾಮರ್ಶೆಗೆ ಮುಂದಾಗಿದ್ದಾರೆ.

ಈ ಸಂಬಂಧ ನಾಡಿದ್ದು ಮಂಗಳವಾರ ಸಂಜೆ 5 ಗಂಟೆಗೆ ಅವರು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಭೆ ಕರೆದಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಚುನಾವಣೆಯಲ್ಲಿ ಹಲವು ಬಿಜೆಪಿ ಶಾಸಕರು ಕಡಿಮೆ ಅಂತರದಲ್ಲಿ ಸೋಲನುಭವಿಸಿದ್ದಾರೆ. ಅವರ ಸೋಲಿಗೆ ಕಾರಣವೇನು, ಯಾವ ಅಂಶಗಳು ಹಿನ್ನಡೆಯಾಯಿತು, ಸರ್ಕಾರ ರಚನೆ ಯತ್ನ ವಿಫಲವೇಕೆ ಆಯಿತು ಎಂಬಿತ್ಯಾದಿ ವಿಷಯಗಳ ಕುರಿತು ಚುನಾವಣೆಯಲ್ಲಿ ಸೋಲನ್ನು ಕಂಡ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದೇನೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿವೆ. ವಿಶ್ವಾಸಮತ ಯಾಚಿಸಿ ಸರ್ಕಾರ ಅಸ್ತಿತ್ವಕ್ಕೆ ಬಂದು ಮಂತ್ರಿಮಂಡಲ ರಚನೆಯಾದ ನಂತರ ಬಿಜೆಪಿಯ ಮುಂದಿನ ನಡೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT