ಹೆಚ್ ಡಿ ಕುಮಾರಸ್ವಾಮಿ-ಡಿಕೆ ಶಿವಕುಮಾರ್ 
ರಾಜಕೀಯ

ಕರ್ನಾಟಕದಲ್ಲಿ ಜಾತ್ಯಾತೀತ ಸರ್ಕಾರಕ್ಕಾಗಿ ಭಿನ್ನಾಭಿಪ್ರಾಯ ಮರೆತು ಮೈತ್ರಿ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗಲಿದ್ದು, ಸರ್ಕಾರ ರಚನೆಗೆ ಮುನ್ನ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಮಂತ್ರಿಗಿರಿಯ ಕುರಿತು ಜೆಡಿಎಸ್ ನೊಂದಿಗೆ ಚೌಕಾಸಿಗಿಳಿದಿದೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗಲಿದ್ದು, ಸರ್ಕಾರ ರಚನೆಗೆ ಮುನ್ನ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಮಂತ್ರಿಗಿರಿಯ ಕುರಿತು ಜೆಡಿಎಸ್ ನೊಂದಿಗೆ ಚೌಕಾಸಿಗಿಳಿದಿದೆ. 
ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಜಾತ್ಯಾತೀತ ಸರ್ಕಾರ ರಚನೆಯಾಗಲು ಕಾಂಗ್ರೆಸ್-ಜೆಡಿಎಸ್ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ರಾಜ್ಯ ವಿಧಾನಸಭಾ  ಚುನಾವಣೆಗೂ ಮುನ್ನ ಕಾಂಗ್ರೆಸ್-ಜೆಡಿಎಸ್ ಪರಸ್ಪರ ಕೆಸೆರೆರೆಚಾಟದಲ್ಲಿ ತೊಡಗಿದುದ್ ನಿಜ, ರಾಜಕೀಯವಾಗಿ ನಾನು 1985 ರಿಂದ ದೇವೇಗೌಡರ ವಿರುದ್ಧವಾಗಿ ಹೋರಾಡುತ್ತಿದ್ದೇನೆ. ಕಳೆದ ವಿಧಾನಸಭಾ ಚುನಾವಣೆ ಹಾಗೂ ವಿಧಾನಸಭಾ ಚುನವಾಣೆಗಳಲ್ಲಿ ಜೆಡಿಎಸ್ ವಿರುದ್ಧ ನಾವು ಸ್ಪರ್ಧಿಸಿ ಗೆದ್ದಿದ್ದೇವೆ. ದೇವೇಗೌಡರ ಸೊಸೆಯ ವಿರುದ್ಧವೂ ನಾವು ಚುನಾವಣೆಯಲ್ಲಿ ಗೆದ್ದಿದ್ದೇವೆ, ಸಾಕಷ್ಟು ರಾಜಕೀಯ ಮಾಡಿದ್ದೇವೆ, ಸಾಕಷ್ಟು ಪ್ರಕರಣಗಳನ್ನೂ ದಾಖಲಿಸಲಾಗಿದೆ. ಆದರೆ ರಾಷ್ಟ್ರದ ಹಿತದೃಷ್ಟಿಯಿಂದ ಹಾಗೂ ಪಕ್ಷದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಸೆಕ್ಯುಲರ್ ಸರ್ಕಾರದ ಅವಶ್ಯಕತೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 
ರಾಹುಲ್ ಗಾಂಧಿ ಸಹ ರಾಜ್ಯದಲ್ಲಿ ಜಾತ್ಯಾತೀತ ಸರ್ಕಾರ ರಚನೆಯಾಗಬೇಕೆಂಬ ನಿರ್ಧಾರಕ್ಕೆ ಬಂದಿದ್ದು, ಈ ಉದ್ದೇಶದಿಂದ ಕಹಿ ನುಂಗಿಕೊಂಡು ಜೆಡಿಎಸ್ ಜೊತೆಗೆ ಸರ್ಕಾರ ರಚನೆ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT