ಅಭಿಮಾನಿ ಮನೆಯಲ್ಲಿ ಬಿಎಸ್ ಯಡಿಯೂರಪ್ಪ 
ರಾಜಕೀಯ

ರಾಜಿನಾಮೆ ಸುದ್ದಿ ಕೇಳಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ಬಿಎಸ್ ವೈ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ರಾಜಿನಾಮೆ ಸುದ್ದಿ ಕೇಳಿ ಹೃದಯಾಘಾತದಿಂದ...

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ರಾಜಿನಾಮೆ ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ಅಭಿಮಾನಿಯ ಮನೆಗೆ ಸೋಮವಾರ ಭೇಟಿ ನೀಡಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಯಡಿಯೂರಪ್ಪ ಅವರು ರಾಜಿನಾಮೆ ಸಲ್ಲಿಸುತ್ತಿದ್ದಂತೆ ಟಿವಿ ನೋಡುತ್ತಿದ್ದ ಅವರ ಅಭಿಮಾನಿ ಚನ್ನಬಸಪ್ಪ ಕಣ್ಣೀರು ಹಾಕಿದ್ದರು. ನಂತರ ಫೋನ್ ನಲ್ಲಿ ಸ್ನೇಹಿತರೊಂದಿಗೆ ಮಾತನಾಡಿ, ಕುಸಿದು ಬಿದ್ದು ಸಾವನ್ನಪ್ಪಿದ್ದರು. 
ಇಂದು ದಾವಣಗೆರೆಯಲ್ಲಿರುವ ಚೆನ್ನಬಸಪ್ಪ ಅವರ ಮನೆಗೆ ಭೇಟಿ ನೀಡಿದ ಬಿಎಸ್ ವೈ ಅವರ ಪತ್ನಿ ರತ್ನಮ್ಮ ಹಾಗೂ ಮಕ್ಕಳಿಗೆ ದೈರ್ಯ ತುಂಬಿ ಸಾಂತ್ವನ ಹೇಳಿದರು. ಈ ವೇಳೆ ಬಿಎಸ್ ವೈ ಒಂದು ಕ್ಷಣ ಭಾವುಕರಾದರು.
ಬಿಎಸ್‍ವೈ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದಾಗ ಚನ್ನಬಸಪ್ಪ ಸಂಭ್ರಮಾಚರಣೆ ಮಾಡಿದ್ದರು. ಸಂಬಂಧಿಕರಿಗೆಲ್ಲ ಫೋನ್ ಮಾಡಿ ಸಂತೋಷ ಹಂಚಿಕೊಂಡಿದ್ದರು. ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಒಬ್ಬರು ಸಿಎಂ ಆಗಿದ್ದಾರೆ ಎಂದು ಖುಷಿಪಟ್ಟಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

SCROLL FOR NEXT