ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ 
ರಾಜಕೀಯ

ಕರ್ನಾಟಕ ಚುನಾವಣೆಯಲ್ಲಿ ಹಣದ ಬಲ ಬಳಸಿದ್ದಕ್ಕಾಗಿ ಮೋದಿ ಕ್ಷಮೆ ಕೇಳಬೇಕು: ಕಾಂಗ್ರೆಸ್

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಣದ ಶಕ್ಕಿ ಬಳಕೆ ಮಾಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ...

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಣದ ಶಕ್ಕಿ ಬಳಕೆ ಮಾಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 
ಬಿಜೆಪಿ ನಾಯಕರು ಅಪರಾಧಗಳ ಚಾಳಿಕೋರರಾಗಿದ್ದು, ಕರ್ನಾಟಕ ಚುನಾವಣೆಯಲ್ಲಿ ಹಣದ ಶಕ್ತಿ ಬಳಸಿದ ಕಾರಣಕ್ಕಾಗಿ ಮೋದಿಯವರು ಇಡೀ ದೇಶದ ಎದುರು ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ. 
ಕರ್ನಾಟಕದ ಚುನಾವಣೆಗೆ ಬಿಜೆಪಿ ರೂ.6,500 ಕೋಟಿ ಖರ್ಚು ಮಾಡಿದೆ. ಇನ್ನು ಶಾಸಕರ ಖರೀದಿಗೆ ರೂ.4,500 ಕೋಟಿ ತೆಗೆದಿರಿಸಿದೆ ಎಂದು ಆರೋಪ ಮಾಡಿದ್ದಾರೆ. 
ಒಟ್ಟಾರೆ ರೂ.11 ಸಾವಿರ ಕೋಟಿಗಳನ್ನು ಚುನಾವಣಾ ಉದ್ದೇಶಕ್ಕೆ ಬಿಜೆಪಿ ತೆಗೆದಿರಿಸಿತ್ತು. ರೂ6,500 ಕೋಟಿ ಚುನಾವಣೆಗೆ ಖರ್ಚು ಮಾಡಿದರೆ, ಶಾಸಕರ ಖರೀದಿಗೆ ರೂ.4,500 ಕೋಟಿ ತೆಗೆದಿರಿಸಿದೆ. ಅಮಿತ್ ಶಾ, ಮೋದಿಯವರು ಈ ಅಕ್ರಮಗಳಿಗಾಗಿ ಕರ್ನಾಟಕದ ಜನರ ಕ್ಷಮೆಯಾಚಿಸಬೇಕು. ಆದರೆ, ಅವರಿಗೆ ದಪ್ಪ ಚರ್ಮವಿದೆ. ಶಾಸಕರ ಖರೀದಿಯಲ್ಲಿ ಅವರದ್ದು ಎತ್ತಿದ ಕೈ. ಬಲಾಬಲ ಪರೀಕ್ಷೆ ದಿನದಂದು ಇಬ್ಬರು ಕಾಂಗ್ರೆಸ್ ಶಾಸಕರು ಪೊಲೀಸರ ರಕ್ಷಣೆಯಲ್ಲಿ ಆಗಮಿಸಬೇಕಾಯಿತು ಎಂದು ದೂರಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಸಂವಿಧಾನದ ಜ್ಞಾನವಿಲ್ಲ. ಒಂದು ವೇಳೆ ಇದ್ದರೂ ಅದಕ್ಕೆ ಅವರು ಗೌರವ ನೀಡಲ್ಲ ಎಂದು ಛೇಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!

SCROLL FOR NEXT