ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ 
ರಾಜಕೀಯ

ನಕಲಿ ಸಿಡಿ; ತನಿಖೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...

ಮೈಸೂರು: ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಎಂಎಲ್'ಸಿ ವಿ.ಎಸ್ ಉಗ್ರಪ್ಪ ಅವರು ಬಿಡುಗಡೆಗೊಳಿಸಿದ್ದ ಬಿಜೆಪಿ ವಿರುದ್ಧದ ಬಿಡುಗಡೆಗೊಳಿಸಿದ್ದ ನಕಲಿ ಸಿಡಿಗಳ ಕುರಿತು ಸರ್ಕಾರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. 
ವಿಶ್ವಾಸಮತಯಾಚನೆ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಲು ಯತ್ನ ನಡೆಸಿತ್ತು ಎಂಬ ಆರೋಪವನ್ನು ಇದೇ ವೇಳೆ ತಳ್ಳಿ ಹಾಕಿರುವ ಅವರು, ಇತ್ತೀಚೆಗಷ್ಟೇ ಸ್ವತಃ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರೇ ಸ್ಪಷ್ಟನೆ ನೀಡಿದ್ದರು. ಬಿಜೆಪಿ ಶಾಸಕರನ್ನು ಖರೀದಸಲು ಯತ್ನ ನಡೆಸಿಲ್ಲ ಎಂದು ಹೇಳಿದ್ದರು. ಆರೋಪಗಳು ಸುಳ್ಳು ಎಂಬುದು ಸಾಬೀತುಪಡಿಸಲು ಇದೇ ಸಾಕ್ಷಿ ಎಂದು ಹೇಳಿದ್ದಾರೆ. 
ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಶೀಘ್ರದಲ್ಲಿಯೇ ಉರುಳಿ ಬೀಳಲಿದೆ. ಜನಾದೇಶ ಬಿಜೆಪಿ ಪರವಾಗಿತ್ತು. ಜೆಡಿಎಸ್ ಕಾಂಗ್ರೆಸ್ ಪಕ್ಷಗಳ ಕುತಂತ್ರದ ಬಗ್ಗೆ ಜನರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ. 
ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭಯರ್ಥಿ ವಿಜುಗೌಡ ಪಾಟೀಲ್ ಅವರು, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು ಬಬಲೇಶ್ವರ ಕ್ಷೇತ್ರದ ವಿವಿ ಪ್ಯಾಟ್ ಯಂತ್ರಗಳನ್ನು ದುರುಪಯೋಗ ಮಾಡಿಕೊಂಡು ಗೆಲವು ಸಾಧಿಸಿದ್ದಾರೆಂದು ಇದೇ ವೇಳೆ ಆರೋಪ ಮಾಡಿದ ಶೋಭಾ ಅವರು, ಸಾಕಷ್ಟು ಭದ್ರತೆ ನೀಡಿ ಇರಿಸಲಾಗಿದ್ದ ವಿವಿ ಪ್ಯಾಟ್ ಯಂತ್ರಗಳು ಖಾಸಗಿ ವ್ಯಕ್ತಿಗೆ ಸೇರಿದೆ ಗೋದಾಮಿನಲ್ಲಿ ಹೇಗೆ ಲಭ್ಯವಾಯಿತು ಎಂದು ಪ್ರಶ್ನೆ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT