ಶಾಸಕರ ಚಿತ್ರ 
ರಾಜಕೀಯ

ನಾಳೆ ವಿಶ್ವಾಸ ಮತದ ಪರೀಕ್ಷೆ: ಇನ್ನೂ ಹೋಟೆಲ್ ಕೊಠಡಿಯಿಂದ ಹೊರಬಾರದ ಕಾಂಗ್ರೆಸ್, ಜೆಡಿಎಸ್ ಶಾಸಕರು

ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ ರೆಸಾರ್ಟ್ ವೊಂದರಲ್ಲಿ ಇರಿಸಲಾಗಿದೆ.

ಬೆಂಗಳೂರು : ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ  ರೆಸಾರ್ಟ್ ವೊಂದರಲ್ಲಿ ಇರಿಸಲಾಗಿದೆ.  ಚುನಾವಣೆಯಲ್ಲಿ ಆತಂತ್ರ ಫಲಿತಾಂಶ ದೊರೆತ ನಂತರ ಕಳೆದ ಒಂಬತ್ತು ದಿನಗಳಿಂದಲೂ ಶಾಸಕರು  ಅವರ ಕುಟುಂಬದಿಂದ ದೂರ ಉಳಿದಿದ್ದಾರೆ.

ದೊಮ್ಮಲೂರಿನ  ಹಿಲ್ಟನ್ ಎಂಬೆಸಿ ಗಲ್ಪ್ ಲಿಂಕ್ಸ್ ನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದರೆ,  ನಗರದ ಹೊರವಲಯ ದೇವನಹಳ್ಳಿಯ ಪ್ರಸ್ಟಿಜ್ ಗಲ್ಪ್ ಸೈರ್ ನಲ್ಲಿ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ.

ವಿಶ್ವಾಸಮತ ಯಾಚನೆವರೆಗೂ ಶಾಸಕರು ರೆಸಾರ್ಟ್ ನಲ್ಲಿ ಇರುತ್ತಾರೆ. ಬಳಿಕ ಅವರ ಕುಟುಂದವರೊಂದಿಗೆ ಸೇರುತ್ತಾರೆ. ನಮ್ಮ ಶಾಸಕರ ನಂಬಿಕೆ ಮೇಲೆ ತಪ್ಪಾದ ಅನಿಸಿಕೆ ವ್ಯಕ್ತಪಡಿಸಲಾಗುತ್ತಿದೆ. ಪಕ್ಷದ ನಿರ್ಧಾರವನ್ನು ಎಲ್ಲರೂ ಬೆಂಬಲಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಶಾಸಕರ ಮೊಬೈಲ್ ಪೋನ್ ಕೂಡಾ ವಶಪಡಿಸಿಕೊಂಡಿದ್ದು, ಹೊರ ಜಗತ್ತಿನ ಸಂಪರ್ಕವೇ ಸಿಗದಂತೆ ಮಾಡಲಾಗಿದೆ. ಅವರಿಂದಲೇ ಪಡೆದು ಮನೆಯವರ ಜೊತೆ ಮಾತನಾಡಲಾಗುತ್ತದೆ. ವಿಶ್ವಾಸ ಮತ ಯಾಚನೆ ವೇಳೆ ಹೊಸ ಸರ್ಕಾರವನ್ನು ಬೀಳಿಸಲಾಗುತ್ತದೆ ಎಂದು ಕೆಲವರು ವದಂತಿ ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

 ರೆಸಾರ್ಟ್ ಹೊರಗಡೆ ಯಾರೊಂದಿಗೂ ಮಾತನಾಡದಂತೆ ಶಾಸಕರನ್ನು ನಿರ್ಬಂಧಿಸಲಾಗಿದೆ. ವಿಶ್ವಾಸಮತ ಬಳಿಕ ಅವರ ಮನೆಗಳಿಗೆ ತೆರಳಲಿದ್ದಾರೆ. ಯಾರೂ ಮೊಬೈಲ್ ಪೋನ್ ಬಳಸುವಂತಿಲ್ಲ. ಆದರೆ, ಅವರ ಮನೆಯವರೊಂದಿಗೆ ಮುಕ್ತವಾಗಿ ಮಾತನಾಡಬಹುದಾಗಿದೆ ಎಂದು  ಜೆಡಿಎಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಸದಾನಂದ ಹೇಳಿದ್ದಾರೆ.

ನೂತನ ಸಿಎಂ ಕುಮಾರಸ್ವಾಮಿ ಪದಗ್ರಹಣ ಕಾರ್ಯಕ್ರಮಕ್ಕೆ ಶಾಸಕರನ್ನು ಸಾಕಷ್ಟು ಬಿಗಿ ಭದ್ರತೆಯಲ್ಲಿ ವಿಧಾನಸೌಧದ ಬಳಿಗೆ ಕರೆತಂದು ಬಳಿಕ ರೆಸಾರ್ಟ್ ಹಾಗೂ ಹೋಟೆಲ್ ಗಳಿಗೆ ಕರೆದೊಯ್ಯಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT