ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ - ಬಿ.ಎಸ್. ಯಡಿಯೂರಪ್ಪ

ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ

ಬೆಂಗಳೂರು : ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಂಮಿಶ್ರ ಸರ್ಕಾರ  ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ  ಎಚ್ಚರಿಕೆ ನೀಡಿದ್ದಾರೆ.

ವಿಶ್ವಾಸಮತ ಯಾಚನೆ ಪ್ರಸ್ತಾಪ ಕುರಿತು ಮಾತನಾಡಿದ ಬಿ.ಎಸ್. ಯಡಿಯೂರಪ್ಪ , ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವಂತೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳಲ್ಲಿನ  ರೈತರ ಸಾಲಮನ್ನಾ ಮಾಡದಿದ್ದರೆ  ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಹೇಳಿದರು.

 ಜೆಡಿಎಸ್ ಚುನಾವಣೆಗೂ ಮುನ್ನ ನೀಡಿದ ಪ್ರಣಾಳಿಕೆಯನ್ನು ಸದನದಲ್ಲಿ ಉಲ್ಲೇಖಿಸಿದ ಯಡಿಯೂರಪ್ಪ , ಸಾಲಮನ್ನಾ ಬಗ್ಗೆ ರಾಜ್ಯದ ರೈತರು ವಿಶ್ವಾಸ ಇಟ್ಟುಕೊಂಡಿದ್ದು, ಸಾಲಮನ್ನಾ ಮಾಡುವ ಮೂಲಕ ಅವರ ನಂಬಿಕೆ ಉಳಿಸಿಕೊಳ್ಳಬೇಕಾಗಿದೆ, ಇಲ್ಲದಿದ್ದರೆ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಭಾಷಣದುದ್ದಕ್ಕೂ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ  ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ,ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಆದರೆ, ಅಪ್ಪ , ಮಕ್ಕಳು ಕಾಂಗ್ರೆಸ್  ಪಕ್ಷವನ್ನು ನಿರ್ನಾಮ ಮಾಡದಿದ್ದರೆ ನನ್ನ ಹೆಸರು ಯಡಿಯೂರಪ್ಪ  ಅಲ್ಲ ಎಂದು ಸವಾಲು ಹಾಕಿದರು.

'ಕುರುಡನ ಹೆಗಲ ಮೇಲೆ ಹೆಳವ ಕೂತಿದ್ದಾನೆ | ದಾರಿ ಸಾಗುವುದೆಂತೋ ನೋಡಬೇಕು' ಎಂಬ ಗೋಪಾಲ ಕೃಷ್ಣರ ಕವನವನ್ನು ಸದನದಲ್ಲಿ ವಾಚಿಸಿದ ಯಡಿಯೂರಪ್ಪ , ಕುಮಾರಸ್ವಾಮಿ ಅವರಿಗೆ ನಂಬಿದವರನ್ನು ಮುಳುಗಿಸುವ ಬುದ್ದಿಯಿದೆ.  ಕುಮಾರಸ್ವಾಮಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ಸಹಕಾರ ನೀಡಿದ್ದೆ, ಆದರೆ,  ಅವರು ನಂಬಿಕೆಗೆ ದ್ರೋಹ ಬಗೆದರು. ಕಾಂಗ್ರೆಸ್ ಕೂಡಾ ಇದೇ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಇದ್ದ ಮಾರ್ಯಾದೆ, ಸಿದ್ದರಾಮಯ್ಯ ಅವರಿಗೆ ಇರಲಿಲ್ಲ. ಅವರೊಂದಿಗೆ ಹೈಕಮಾಂಡ್ ನಡೆದುಕೊಂಡ ರೀತಿ ಕೂಡಾ ಸರಿಯಾಗಿರಲಿಲ್ಲ. ಮೈಸೂರಿನಲ್ಲಿ ಸೋಲಿಸುವ ಮೂಲಕ ಅವರನ್ನು  ಅವಮಾನಿಸಲಾಗಿದೆ. ಡಿ. ಕೆ. ಶಿವಕುಮಾರ್ ಇಡೀ ಪ್ರಸಂಗದ ಖಳನಾಯಕನಾಗಿದ್ದು, ಮುಂದೆ    ಪಾಶ್ಚ್ಯತಾಪ ಪಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT