ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ - ಬಿ.ಎಸ್. ಯಡಿಯೂರಪ್ಪ

ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ

ಬೆಂಗಳೂರು : ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಂಮಿಶ್ರ ಸರ್ಕಾರ  ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ  ಎಚ್ಚರಿಕೆ ನೀಡಿದ್ದಾರೆ.

ವಿಶ್ವಾಸಮತ ಯಾಚನೆ ಪ್ರಸ್ತಾಪ ಕುರಿತು ಮಾತನಾಡಿದ ಬಿ.ಎಸ್. ಯಡಿಯೂರಪ್ಪ , ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವಂತೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳಲ್ಲಿನ  ರೈತರ ಸಾಲಮನ್ನಾ ಮಾಡದಿದ್ದರೆ  ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಹೇಳಿದರು.

 ಜೆಡಿಎಸ್ ಚುನಾವಣೆಗೂ ಮುನ್ನ ನೀಡಿದ ಪ್ರಣಾಳಿಕೆಯನ್ನು ಸದನದಲ್ಲಿ ಉಲ್ಲೇಖಿಸಿದ ಯಡಿಯೂರಪ್ಪ , ಸಾಲಮನ್ನಾ ಬಗ್ಗೆ ರಾಜ್ಯದ ರೈತರು ವಿಶ್ವಾಸ ಇಟ್ಟುಕೊಂಡಿದ್ದು, ಸಾಲಮನ್ನಾ ಮಾಡುವ ಮೂಲಕ ಅವರ ನಂಬಿಕೆ ಉಳಿಸಿಕೊಳ್ಳಬೇಕಾಗಿದೆ, ಇಲ್ಲದಿದ್ದರೆ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಭಾಷಣದುದ್ದಕ್ಕೂ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ  ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ,ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಆದರೆ, ಅಪ್ಪ , ಮಕ್ಕಳು ಕಾಂಗ್ರೆಸ್  ಪಕ್ಷವನ್ನು ನಿರ್ನಾಮ ಮಾಡದಿದ್ದರೆ ನನ್ನ ಹೆಸರು ಯಡಿಯೂರಪ್ಪ  ಅಲ್ಲ ಎಂದು ಸವಾಲು ಹಾಕಿದರು.

'ಕುರುಡನ ಹೆಗಲ ಮೇಲೆ ಹೆಳವ ಕೂತಿದ್ದಾನೆ | ದಾರಿ ಸಾಗುವುದೆಂತೋ ನೋಡಬೇಕು' ಎಂಬ ಗೋಪಾಲ ಕೃಷ್ಣರ ಕವನವನ್ನು ಸದನದಲ್ಲಿ ವಾಚಿಸಿದ ಯಡಿಯೂರಪ್ಪ , ಕುಮಾರಸ್ವಾಮಿ ಅವರಿಗೆ ನಂಬಿದವರನ್ನು ಮುಳುಗಿಸುವ ಬುದ್ದಿಯಿದೆ.  ಕುಮಾರಸ್ವಾಮಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ಸಹಕಾರ ನೀಡಿದ್ದೆ, ಆದರೆ,  ಅವರು ನಂಬಿಕೆಗೆ ದ್ರೋಹ ಬಗೆದರು. ಕಾಂಗ್ರೆಸ್ ಕೂಡಾ ಇದೇ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಇದ್ದ ಮಾರ್ಯಾದೆ, ಸಿದ್ದರಾಮಯ್ಯ ಅವರಿಗೆ ಇರಲಿಲ್ಲ. ಅವರೊಂದಿಗೆ ಹೈಕಮಾಂಡ್ ನಡೆದುಕೊಂಡ ರೀತಿ ಕೂಡಾ ಸರಿಯಾಗಿರಲಿಲ್ಲ. ಮೈಸೂರಿನಲ್ಲಿ ಸೋಲಿಸುವ ಮೂಲಕ ಅವರನ್ನು  ಅವಮಾನಿಸಲಾಗಿದೆ. ಡಿ. ಕೆ. ಶಿವಕುಮಾರ್ ಇಡೀ ಪ್ರಸಂಗದ ಖಳನಾಯಕನಾಗಿದ್ದು, ಮುಂದೆ    ಪಾಶ್ಚ್ಯತಾಪ ಪಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT