ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ 5 ವರ್ಷ ಸ್ಥಿರವಾಗಿರಲಿದೆ: ಸಿಎಂ ಕುಮಾರಸ್ವಾಮಿ

ಕಾಂಗ್ರೆಸ್ - ಜೆಡಿಎಸ್ ಸರ್ಕಾರ ಐದು ವರ್ಷ ಸ್ಥಿರವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಸರ್ಕಾರ ಐದು ವರ್ಷ ಸ್ಥಿರವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರಾಜ್ಯದ ಜನ ನನಗೆ ಸಂಪೂರ್ಣ ಬಹುಮತ ನೀಡದಿರುವ ಬಗ್ಗೆ ನನಗೂ ನೋವಿದೆ. ಆದರೂ ನಾವು ಸ್ಥಿರ ಸರ್ಕಾರ ನೀಡುತ್ತೇವೆ ವಿಶ್ವಾಸ ವ್ಯಕ್ತಪಡಿಸಿದರು.
ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ನಮ್ಮ ಸ್ವಹಿತಾಸಕ್ತಿಗಾಗಿ ಕೆಲಸ ಮಾಡುವುದಿಲ್ಲ. ನಾನಾಗಲಿ, ನಮ್ಮ ಕುಟುಂಬದವರಾಗಲಿ ಅಧಿಕಾರಕ್ಕೆ ಆಸೆ ಪಟ್ಟವರಲ್ಲ, ದೇವೇಗೌಡರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದಾಗ ವಾಜಪೇಯಿ ಅವರು ಬೆಂಬಲ ನೀಡುವುದಾಗಿ ಒಂದು ಚೀಟಿ ಕಳುಹಿಸಿದ್ದರು ಆದರೆ ನನ್ನ ತಂದೆಯವರು ಬಿಜೆಪಿ ಜೊತೆ ಹೋಗಲ್ಲ ಎಂದು ಹೇಳಿದರು,  ಕಾಂಗ್ರೆಸ್ ಪಕ್ಷದ ನೆರವಿನಿಂದ ನನ್ನ ತಂದೆ ಪ್ರಧಾನಿಯಾದರು, ಇಂದು ನಾನು ಮುಖ್ಯಮಂತ್ರಿಯಾದೆ ಎಂದರು.
ಇದೇ ವೇಳೆ 2006ರಲ್ಲಿ ಬಿಜೆಪಿ ಜೊತೆ ಸರ್ಕಾರ ರಚಿಸಿದನ್ನು ನೆನಪಿಸಿಕೊಂಡ ಕುಮಾರಸ್ವಾಮಿ, ಬಿಜೆಪಿಗೆ ಅಧಿಕಾರ ನೀಡದಿದ್ದಕ್ಕೆ ವಚನ ಭ್ರಷ್ಟ ಎಂಬ ಹಣೆಪಟ್ಟಿ ಕಟ್ಟಿದ್ದರು, ನಾನು ಖಂಡಿತವಾಗಿಯೂ ವಚನ ಭ್ರಷ್ಟ ಅಲ್ಲ, ಅಂದಿನ ಪರಿಸ್ಥಿತಿ, ಪಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯ ಇತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT