ರಾಜಕೀಯ

ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ

Manjula VN
ಬೆಂಗಳೂರು: ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 
ವಿಧಾನಸೌಧಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆಮಾತನಾಡಿರುವ ಅವರು, ನನಗೆ ಯಾವುದೇ ರೀತಿಯ ಆತಂಕವಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 
ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ದೇವೇಗೌಡ ಅವರು ಮಹತ್ವದ ಸಲಹೆಗಳನ್ನು ನೀಡಿದ್ದಾರೆಂದು ವರದಿಗಳು ತಿಳಿಸಿವೆ. 
SCROLL FOR NEXT