ಸಂಗ್ರಹ ಚಿತ್ರ 
ರಾಜಕೀಯ

ಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ

ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ...

ಬೆಂಗಳೂರು; ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. 
ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಬರುವ ಸೋಮವಾರ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಉಭಯ ಪಕ್ಷಗಳ ಅಭ್ಯರ್ಥಿಗಳು ನಕಾರ ವ್ಯಕ್ತಪಡಿಸುತ್ತಿದ್ದಾರೆ. 
ಮೈತ್ರಿ ಸರ್ಕಾರ ರಚನೆಯಾದ ಬೆನ್ನಲ್ಲೇ ಚುನಾವಣೆ ಹೊಂದಾಣಿಕೆಯಲ್ಲಿ ಒಡಕು ಮೂಡಿದ್ದು, ಈ ಕುರಿತು ಇಂದು ಸ್ಪಷ್ಟ ಚಿತ್ರಣಗಳು ಹೊರಬೀಳುವ ನಿರೀಕ್ಷೆಗಳಿವೆ. 
ನಿನ್ನೆಯಷ್ಟೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ಸಂಧಾನ ಸಭೆ ನಡೆಸಿದ್ದರು. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯನ್ನು ಮಣಿಸಲು ಹೊಂದಾಣಿಕೆ ಮಾಡಿಕೊಳ್ಳುವ ಚರ್ಚೆಯು ಯಾವುದೇ ಫಲಕಾರಿ ನೀಡದ ಕಾರಣ, ಈ ಸಂಧಾನ ಸಭೆ ವಿಫಲಗೊಂಡಿದೆ. 
ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮತ್ತು ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಇಬ್ಬರೂ ಸಹ ಸಭೆಯಲ್ಲಿ ಸಂಧಾನಕ್ಕೆ ಸಹಮತ ವ್ಯಕ್ತಪಡಿಸಿಲ್ಲ ಇದು ನಾಯಕರನ್ನು ಇಕ್ಕಟ್ಟಿಗೆ ಸಿಲುವಂತೆ ಮಾಡಿದೆ. 
ಚುನಾವಣಾ ಕಣದಿಂದ ಹಿಂದಕ್ಕೆ ಸರಿಯಲು ಇಬ್ಬರೂ ನಾಯಕರು ನಿರಾಕರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲು ಇಂದು ಬಹುಮತ ಸಾಬೀತುಪಡಿಸಿದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಲು ಎರಡೂ ಪಕ್ಷ ಮುಖಂಡರು ತೀರ್ಮಾನಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT