ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ನಮ್ಮ ಹೋರಾಟ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ: ಬಿ.ಎಸ್. ಯಡಿಯೂರಪ್ಪ

ವಿಧಾನಸಭೆಯ ಇಂದಿನ ಅಧಿವೇಶನದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ರಾಜ್ಯಾದ್ಯಂತ ...

ಬೆಂಗಳೂರು: ವಿಧಾನಸಭೆಯ ಇಂದಿನ ಅಧಿವೇಶನದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಆರಂಭಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದೆ.

ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಜೆಡಿಎಸ್ ಈ ಹಿಂದೆ ಚುನಾವಣೆ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಅದರಂತೆ ನಡೆದುಕೊಳ್ಳಬೇಕಾಗಿದೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ವಿಶ್ವಾಸಮತ ತೆಗೆದುಕೊಂಡ ನಡೆಯುವ ಅಧಿವೇಶನದಲ್ಲಿ ರಾಜ್ಯದ ರೈತರ 53 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡುವ ಕುರಿತು ಸ್ಪಷ್ಟವಾಗಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಯಾವ ರೀತಿ ಹೋರಾಟ ನಡೆಸಬೇಕೆಂದು ರೂಪುರೇಷೆಗಳನ್ನು ಮಾಡಿಕೊಂಡು ಸಿದ್ದರಾಗಲಿದ್ದೇವೆ ಎಂದು ಹೇಳಿದರು.

ವಿಧಾನಸಭೆಯಲ್ಲಿ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಲಿದ್ದೇವೆ.ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದೆ. ಹೀಗಾಗಿ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಹೋರಾಟ ಸರ್ಕಾರ ವಿರುದ್ಧವಲ್ಲ, ಅಥವಾ ಕಾಂಗ್ರೆಸ್ ವಿರುದ್ಧ ಅಲ್ಲ, ನಮ್ಮ ಹೋರಾಟ, ವಿರೋಧ ಇರುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧವಾಗಿದೆ ಎಂದು ಹೇಳಿದರು.

ಇನ್ನೊಂದೆಡೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ