ವಿಧಾನಸಭಾಧ್ಯಕ್ಷ ಕೆ.ರಮೇಶ್ ಕುಮಾರ್ 
ರಾಜಕೀಯ

ಸ್ಪೀಕರ್ ರಮೇಶ್ ಕುಮಾರ್ ಸದನಕ್ಕೆ ಗತವೈಭವವನ್ನು ಮರುಕಳಿಸಲಿ: ಸಿಎಂ, ಮಾಜಿ ಸಿಎಂ ಆಶಯ

ಕರ್ನಾಟಕದ 15ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಕೆ.ಆರ್. ರಮೇಶ್ ಕುಮಾರ್...

ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದರು.

ನಂತರ ಸದನವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸೇವಾ ಹಿರಿತನದ ಆಧಾರದ ಮೇಲೆ 2ನೇ ಬಾರಿಗೆ ರಮೇಶ್ ಕುಮಾರ್ ಅವರು ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಅನುಭವ ಈ ಸದನದ 221 ಸದಸ್ಯರಿಗೆ ದೊರಕುವಂತಾಗಲಿ ಎಂದು ಆಶಿಸಿದರು.

ಸ್ಪೀಕರ್ ಆಗಿ ರಮೇಶ್ ಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿರುವುದು ಸಂತಸ ತಂದಿದೆ. ವೈಕುಂಠ ಬಾಳಿಗ ಮತ್ತು ಕೆ.ಎಸ್.ನಾಗರತ್ಮಮ್ಮನಂತವರು ಈ ಸದನದ ಸಭಾಧ್ಯಕ್ಷರಾಗಿ ಅವಿಸ್ಮರಣೀಯ ಸೇವೆ ನೀಡಿದ್ದಾರೆ. ಅಂತೆಯೇ ಈ ಬಾರಿ ಕೂಡ ಸಭಾಧ್ಯಕ್ಷರ ಮಾರ್ಗದರ್ಶನದಲ್ಲಿ ಈ ನಾಡಿಗೆ ಉತ್ತಮ ಆಡಳಿತ ನೀಡುವಂತಾಗಲಿ ಎಂದು ಆಶಿಸುತ್ತೇನೆ ಎಂದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ನೇರ ನುಡಿ, ಮೇಧಾವಿತನ, ಸಮಾಜದ ಬಡವರ ಬಗ್ಗೆ ಇರುವ ಬದ್ಧತೆ ರಮೇಶ್ ಕುಮಾರ್ ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದೆ. 2 ನೇ ಬಾರಿಗೆ ಸಭಾಧ್ಯಕ್ಷರಾಗಿ ಸ್ಥಾನ ತುಂಬಿರುವ ರಮೇಶ್ ಕುಮಾರ್ ಅವರು ಇಡೀ ಸದನವನ್ನು ಉತ್ತಮವಾಗಿ ನಡೆಸಿಕೊಂಡು ಹೋಗುವಿರಾಗಿ ನಂಬುತ್ತೇನೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಕಾನೂನು ಜ್ಞಾನ ಹೊಂದಿರುವ, 40 ವರ್ಷಕ್ಕೂ ಹೆಚ್ಚು ಕಾಲ ರಾಜಕೀಯ ಅನುಭವ ಹೊಂದಿರುವ ರಮೇಶ್ ಕುಮಾರ್ ಅವರು ವಿಧಾನಸಭಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದು ಸಂತಸದ ವಿಷಯ ಎಂದರು.

ಇತ್ತೀಚೆಗೆ ಸದನದಲ್ಲಿ ಗಂಭೀರ, ಚಿಂತನಾರ್ಹ ಚರ್ಚೆಗಳು ನಡೆಯುವುದಿಲ್ಲ, ಸದನ ಸದಸ್ಯರು ಸಕ್ರಿಯವಾಗಿ ಕಲಾಪದಲ್ಲಿ ಭಾಗವಹಿಸುವುದಿಲ್ಲ ಎಂಬ ಆರೋಪಗಳಿವೆ. ಇನ್ನು ಮುಂದೆ ರಮೇಶ್ ಕುಮಾರ್ ಅವರ ಮುಂದಾಳತ್ವದಲ್ಲಿ ಗತವೈಭವ ಕಲಾಪದಲ್ಲಿ ಮತ್ತು ಸದನದಲ್ಲಿ ಮರುಕಳಿಸಲಿ ಎಂದು ಸಿದ್ದರಾಮಯ್ಯ ಆಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ