ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಪ್ರಚಾರ 
ರಾಜಕೀಯ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ನಾಳೆ ಮತದಾನ

ಬೆಂಗಳೂರು ನಗರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಮತದಾನ ನಡೆಯಲಿದೆ.

ಬೆಂಗಳೂರು: ಬೆಂಗಳೂರು ನಗರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಮತದಾನ ನಡೆಯಲಿದೆ. ಅಪಾರ್ಟ್ ಮೆಂಟ್ ಒಂದರಲ್ಲಿ 9,564 ಮತದಾರರ ಗುರುತು ಪತ್ರಗಳು ಪತ್ತೆಯಾದ ಬಳಿಕ ಮೇ 12ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿತ್ತು.
ರಾಜ್ಯದಲ್ಲಿ ಜೆಡಿ (ಎಸ್) -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುವ ಹೊರತಾಗಿಯೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕ ಸ್ಪರ್ಧೆಗಿಳಿದಿದೆ. ಕಾಂಗ್ರೆಸ್ ನ ಮುನಿರತ್ನ, ಜೆಡಿಎಸ್ ನಿಂದ ರಾಮಚಂದ್ರಪ್ಪ ಕಣದಲ್ಲಿದ್ದಾರೆ.ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಶನಿವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ.
ಮಾಜಿ ಕಾರ್ಪೊರೇಟರ್ ರಾಮಚಂದ್ರಪ್ಪ ಅವರು ಕಾಂಗ್ರೆಸ್ ನ ಮುನಿರತ್ನ ವಿರುದ್ಧ ತೀವ್ರ ಸ್ಪರ್ಧೆ ನೀಡುವ ಸಂಭವವಿದ್ದು ಬಿಜೆಪಿಯಿಂದ ಪಕ್ಷದ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ ಅಖಾಡದಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುನೀರಾಜು ಗೌಡ ಅವರ ಪರವಾಗಿ ನಟಿ, ರಾಜಕಾರಣಿ ಶೃತಿ ಅವರೊಂದಿಗೆ ರೋಡ್ ಶೋ ನಡೆಸಿದ್ದಾರೆ.
2013 ರಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮುನಿರತ್ನ ಹಿರಿಯ ಕಾಂಗ್ರೆಸ್ ನಾಯಕರು ಕ್ಯಾಬಿನೆಟ್ ಹುದ್ದೆಗಳ ಕುರಿತು ಚರ್ಚಿಸಲು ತೆರಳಿರುವ ಸಮಯ ತಾವೇ ಸ್ವತಃಅ ಪ್ರಚಾರ ನಡೆಇಸಿದ್ದರು.
ಕ್ಷೇತ್ರದಲ್ಲಿ ನಾಳೆ ನಡೆಯುವ ಮತದಾನದ ಮತ ಎಣಿಕೆ ಕಾರ್ಯ ಮೇ 31ರಂದು ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ