ಸಿದ್ದು ನ್ಯಾಮಗೌಡ 
ರಾಜಕೀಯ

ಸಿದ್ದು ನ್ಯಾಮಗೌಡರ ನಿಧನ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಸವಾಲು

ಅಪಘಾತದಲ್ಲಿ ಜಮಖಂಡಿ ಹಾಲಿ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಸವಾಲು ಎದುರಾಗಿದೆ....

ಬಾಗಲಕೋಟೆ:  ಅಪಘಾತದಲ್ಲಿ ಜಮಖಂಡಿ ಹಾಲಿ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಸವಾಲು ಎದುರಾಗಿದೆ.
ಬಾದಾಮಿ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲಲು ಸಿದ್ದು ನ್ಯಾಮಗೌಡ ಪ್ರಮುಖ ಪಾತ್ರ ವಹಿಸಿದ್ದರು, ಹುನಗುಂದದಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಬಾಗಲಕೋಟೆಯಿಂದ ಮಾಜಿ ಸಚಿವ ಎಚ್ ವೈ ಮೇಟಿ,  ತೇರದಾಳದಿಂದ ಉಮಾಶ್ರೀ ಮತ್ತು ಬೀಳಗಿಯಿಂದ ಜೆ.ಟಿ ಪಾಟೀಲ್ ಸ್ಪರ್ಧಿಸಿ ಸೋತಿದ್ದರು. ಸದ್ಯ ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಅದರಲ್ಲಿ 5ರಲ್ಲಿ ಬಿಜೆಪಿ ಮತ್ತು2 ರಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಸಿದ್ದು ನ್ಯಾಮಗೌಡ ನಿಧನದಿಂದಾಗಿ ಜಮಖಂಡಿ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಗೆಲ್ಲುವುದು ಕಷ್ಟ ಎಂದು ಹೇಳಲಾಗುತ್ತಿದೆ, ಈ ಕ್ಷೇತ್ರವನ್ನು ತನ್ನ ಪಾಲಾಗಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ.
ಸೋಲುವ ಮುಜುಗರ ತಪ್ಪಿಸಿಕೊಳ್ಳುವ ಸಲುವಾಗಿ ಹಾಗೂ ಜಮಖಂಡಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಯಸಿರುವ ಕಾಂಗ್ರೆಸ್ ನ್ಯಾಮಗೌಡ ಅವರ ಇಬ್ಬರು ಗಂಡು ಮಕ್ಕಳಲ್ಲಿ ಒಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ, ಬಾದಾಮಿಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಡ ಹಾಕಿದ್ದ ಎಸ್.ಆರ್ ಪಾಟೀಲ್ ಮತ್ತು ಆರ್.ಬಿ ತಿಮ್ಮಾಪುರ ಅವರಿಗೆ ಜಮಖಂಡಿ ಕ್ಷೇತ್ರ ಬಹು ದೊಡ್ಡ ಸವಾಲಾಗಿದೆ. 
ಜಮಖಂಡಿಯಿಂದ ಆನಂದ್ ಎಸ್ ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು  ಕಾಂಗ್ರೆಸ್ ನಿರ್ಧರಿಸಿದೆ, ಸಿದ್ದು ನ್ಯಾಮಗೌಡ ಅವರ ಹಿರಿಯ ಪುತ್ರನಾಗಿರುವ ಆನಂದ್ ಇತ್ತೀಚೆಗೆ ನಡೆದ ವಿಧಾನಸಭೆ  ಚುನಾವಣೆಯಲ್ಲಿ ತಂದೆ ಪರ ಪ್ರಚಾರ ನಡೆಸಿದ್ದರು. ಎಂಬಿಎ ಪದವೀಧರರಾಗಿರುವ ಅವರು ಜಮಖಂಡಿ ಸಕ್ಕರೆ ಕಾರ್ಖಾನೆ ಮತ್ತು  ತಂದೆಯ ವ್ಯವಹಾರ ಉದ್ಯಮ ನೋಡಿಕೊಳ್ಳುತ್ತಿದ್ದಾರೆ.
ಜಮಖಂಡಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶ್ರೀಕಾಂತ್ ಕುಲಕರ್ಣಿ ಸೋತಿದ್ದರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿಯಿಂದ ಹೊರಬಂದು ಸಂಗಮೇಶ್ ನಿರಾಣಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ 24, 461 ಮತ ಪಡೆದಿದ್ದರು. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಸೋಲಿಸಲು ಪ್ರಮುಖ ಪಾತ್ರ ವಹಿಸಿದ್ದರು. ಇದು ಸಿದ್ದು ನ್ಯಾಮಗೌಡ ಗೆಲುವಿಗೆ ಕಾರಣವಾಗಿತ್ತು.
ಜಮಖಂಡಿ ಕ್ಷೇತ್ರದ ಉಪ ಚುನಾವಣೆ ಎರಡು ಪಕ್ಷಗಳಿಗೂ ದೊಡ್ಡ ಸವಾಲಾಗಿದೆ,ಒಂದು ವೇಳೆ ಆನಂದ್ ನ್ಯಾಮಗೌಡ ಅವರನ್ನು ಕಣಕ್ಕಿಳಿಸಿದರೇ ಅವರಿಗೆ ಗಾಣಿಗ ಸಮುದಾಯದ ಮತಗಳು ಹಾಗೂ ಸಹಾನೂಭೂತಿ ಮತಗಳು ದೊರೆಯಲಿವೆ. ಒಂದು ವೇಳೆ ಬಿಜೆಪಿ ಸಂಗಮೇಶ್ ನಿರಾಣಿ ಅವರಿಗೆ ಟಿಕೆಟ್ ನೀಡಿದರೇ ಗೆಲವು ಶತಃಸಿದ್ದ.ಇಲ್ಲದಿದ್ದರೇ ಕಾಂಗ್ರೆಸ್ ಗೆಲುವು ಸುಲಭವಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT