ರವಿ ಕೃಷ್ಣಾ ರೆಡ್ಡಿ 
ರಾಜಕೀಯ

ಹಣ, ಸೀರೆ, ಕುಕ್ಕರ್ ಹಂಚಲು ಅನುಮತಿ ನೀಡಿ: ಆಯೋಗಕ್ಕೆ ಜಯನಗರ ಕ್ಷೇತ್ರದ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಮನವಿ

ಮತದಾರರಿಗೆ ಹಣ ಕುಕ್ಕರ್‌, ಸೀರೆ ಹಂಚಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಜಯನಗರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಪತ್ರ ...

ಬೆಂಗಳೂರು: ಮತದಾರರಿಗೆ  ಹಣ ಕುಕ್ಕರ್‌, ಸೀರೆ ಹಂಚಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಜಯನಗರ ಕ್ಷೇತ್ರದ  ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ  ಪತ್ರ ಬರೆದಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಆಯೋಗ ವಿಫಲವಾಗಿದೆ. ಹಣ, ಕುಕ್ಕರ್‌ ಸೀರೆ ಹಂಚಿ ಮತ ಖರೀದಿ ರಾಜಾರೋಷವಾಗಿ ನಡೆಯುತ್ತಿದೆ.
ನಾನು ಆಯೋಗದ ಅನುಮತಿ ಪಡೆದೇ ಇವುಗಳನ್ನು ಹಂಚುತ್ತೇನೆ. ಇದಕ್ಕೆ ಆಯೋಗ ನನಗೆ ಲಿಖಿತವಾಗಿ ಅನುಮತಿ ನೀಡಬೇಕು ಎಂದು ಹೇಳಿದ್ದಾರೆ, ಒಂದು ವೇಳೆ ಆಯೋಗ ಉತ್ತರ ನೀಡದಿದ್ದರೆ ಮೌನಂ ಸಮ್ಮತಿ ಲಕ್ಷಣ ಎಂದು ಭಾವಿಸುತ್ತೇನೆ. ಜೂನ್‌ 2ರಂದು ಬೆಳಿಗ್ಗೆ 11 ಗಂಟೆಗೆ ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ಇವುಗಳನ್ನು ಹಂಚುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಗುಟ್ಟಾಗಿ ಹಂಚುತ್ತಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮುಖಂಡರೊಬ್ಬರು 25 ಸಾವಿರ ಸೀರೆಗಳನ್ನು ಹಂಚಿದ್ದರು. ನನಗೆ ಅಂತಹ ಭಯ ಇಲ್ಲ. ಉಡುಗೊರೆಗಳನ್ನು ಪಡೆಯಲು ಮತದಾರರು ಪ್ರಾಮಾಣಿಕವಾಗಿ ಬರಬೇಕು. 28 ಲಕ್ಷ ಚುನಾವಣಾ ವೆಚ್ಚದ ಮಿತಿಯಲ್ಲೇ ಉಡುಗೊರೆಗಳನ್ನು ನೀಡುತ್ತೇನೆ. ಮತದಾರರ ಗುರುತಿನ ಚೀಟಿ ತೋರಿಸಿ ಇವುಗಳನ್ನು ಪಡೆಯಬೇಕು’ ಎಂದರು.
ಒಂದು ವೋಟಿಗೆ 2.888 ರು ಹಣ, ಒಂದು ಸೀರೆ, ಒಂದು ಕುಕ್ಕರ್, ಒಂದು ನಿಕ್ಕರ್ ನೀಡುತ್ತೇನೆ, ಆದರೆ ನಾನು ಲಿಕ್ಕರ್ ಹಂಚುವುದಿಲ್ಲ, ಏಕೆಂದರೇ ನಾನು ಮದ್ಯಪಾನ ಸೇವಿಸುವ ವಿರೋಧಿಯಾಗಿದ್ದೇನೆ, ಇದು ಗ್ರಾಮೀಣ ಭಾಗಗಳಲ್ಲಿ  ಬಡತನ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT