ರಾಜಕೀಯ

ಕಾಂಗ್ರೆಸ್ ಗೆ ರಾಮನಗರ ಅಭ್ಯರ್ಥಿ; ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ವಿರುದ್ಧವೇ ದೂರು?

Srinivasamurthy VN
ಬೆಂಗಳೂರು: ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ರಾಮನಗರದಲ್ಲಾದ ಮುಖಭಂಗಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೇ ನೇರ ಹೊಣೆಯನ್ನಾಗಿ ಮಾಡಿ ಅವರ ವಿರುದ್ಧವೇ ಹೈಕಮಾಂಡ್ ಗೆ ದೂರು ನೀಡಲಾಗಿದೆ ಎನ್ನಲಾಗುತ್ತಿದೆ. 
ಮೂಲಗಳ ಪ್ರಕಾರ ಈ ಹಿಂದೆ ಯಡಿಯೂರಪ್ಪ ಅವರೇ ಸಿ ಪಿ ಯೋಗೇಶ್ವರ್ ಅವರನ್ನು ಬಿಜೆಪಿಗೆ ಕರೆ ತಂದಿದ್ದರು. ಯೋಗೇಶ್ವರ್ ಮಾತು ಕೇಳಿ ಚಂದ್ರಶೇಖರ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡರು. ಪರಿಣಾಮ ಈಗ ಕೊನೇ ಕ್ಷಣದಲ್ಲಿ ನಮ್ಮ ಅಭ್ಯರ್ಥಿಯೇ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಣ ದೂರು ಕೊಟ್ಟಿದೆ ಎಂದು ಹೇಳಲಾಗಿದೆ.
SCROLL FOR NEXT