ಎಲ್ ಚಂದ್ರಶೇಖರ್ ಮತ್ತು ಅನಿತಾ ಕುಮಾರಸ್ವಾಮಿ 
ರಾಜಕೀಯ

ಚಂದ್ರಶೇಖರ್ ನಡೆಯಿಂದ ಬಿಜೆಪಿಗೆ ಮುಖಭಂಗ; ಪತ್ನಿ ಪರ ಪ್ರಚಾರ ಕೈಬಿಟ್ಟ ಸಿಎಂ; ಕಮಲ ಬಿಟ್ಟು ತೆನೆ ಹೊತ್ತ 'ಲೀಲಾವತಿ'!

ನಾಳೆ ಅಂದರೆ ಶನಿವಾರ ರಾಮನಗರದ ಸುಮಾರು 2 ಲಕ್ಷ ಮತದಾರರು ತಮ್ಮ ವಿಧಾನಸಭೆ ಕ್ಷೇತ್ರದ ಮುಂದಿನ ಪ್ರತಿನಿಧಿಯನ್ನು ಆಯ್ಕೆ ಮಾಡಲಿದ್ದಾರೆ,...

ರಾಮನಗರ: ನಾಳೆ ಅಂದರೆ ಶನಿವಾರ ರಾಮನಗರದ ಸುಮಾರು 2 ಲಕ್ಷ ಮತದಾರರು ತಮ್ಮ ವಿಧಾನಸಭೆ ಕ್ಷೇತ್ರದ ಮುಂದಿನ ಪ್ರತಿನಿಧಿಯನ್ನು ಆಯ್ಕೆ ಮಾಡಲಿದ್ದಾರೆ, ಒಕ್ಕಲಿಗ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಹಂಬಲಿಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ತಮ್ಮ ಪಕ್ಷದ ಅಭ್ಯರ್ಥಿ ಕೈಗೊಂಡ ನಿಲುವಿನಿಂದ ಆಘಾತವಾಗಿದೆ. ಜೊತೆಗೆ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ಚುನಾವಣೆಗೆ ಇನ್ನೂ ಕೆಲವೇ ಗಂಟೆಗಳು ಬಾಕಿಯಿರುವಾಗ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರ ಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ, 
ಗುರುವಾರ ಎಲ್ಲಾ ಪಕ್ಷಗಳ ರಾಜಕೀಯ ಚಟುವಟಿಕೆಗೆ ತೆರೆ ಬಿದ್ದಿದೆ. ಆಕ್ರೋಶ ಗೊಂಡ ಬಿಜೆಪಿ ಕಾರ್ಯಕರ್ತರು ಚಂದ್ರಶೇಖರ್ ವಿರುದ್ಧ ಅಣುಕು ಶವಯಾತ್ರೆ ನಡೆಸಿದರು. ಈ ಎಲ್ಲೆ ಬೆಳವಣಿಗಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ತಮ್ಮ ಪತ್ನಿ ಪರ ಹಮ್ಮಿಕೊಂಡಿದ್ದ ರ್ಯಾಲಿಯನ್ನು ರದ್ದುಗೊಳಿಸಿದರು. 
ಸ್ಥಳೀಯ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ನಾವು ಸಂತಸದಿಂದ ಇದ್ದೆವು. ಅನಿತಾ ಕುಮಾರ ಸ್ವಾಮಿ ಅವರನ್ನು ಚುನಾಯಿಸುವುದು ಆಯ್ಕೆಯಲ್ಲ, ಏಕೆಂದರೇ ಅವರು ಯಾವುದೇ ಕಾರಣಕ್ಕೂ ಕ್ಷೇತ್ರದಲ್ಲಿ ಇರುವುದಿಲ್ಲ,  ಎಂದು ರಾಮನಗರ ಬಿಜೆಪಿ ಪದಾಧಿಕಾರಿ ರಾಜುಕುಮಾರ್ ಗೌಡ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಇಲ್ಲಿ ಉತ್ತಮ ಬೆಂಬಲ ದೊರಕುತ್ತಿತ್ತು, ಆದರೆ ಅವರು ಚುನಾವಣೆಯನ್ನು ಧಿಕ್ಕರಿಸಿದ್ದಾರೆ ಎಂದು ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಹೇಳಿದ್ದಾರೆ.
ರಾಮನಗರದಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನೆಡೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲೀಲಾವತಿ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. 
ಇನ್ನೂ ಚಂದ್ರಶೇಖರ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್, ಚಂದ್ರಶೇಖರ್ ಅವರಿಗೆ ಡಿ,ಕೆ ಶಿವಕುಮಾರ್ ಬೆದರಿಕೆ ಹಾಕಿರಬಹುದು. ಬುಧವಾರ ಮಧ್ಯಾಹ್ನ 2.30 ರವರೆಗೆ ಚಂದ್ರಶೇಖರ್ ಪ್ರಚಾರದಲ್ಲಿ ಭಾಗವಹಿಸಿದ್ದರು. ಅದಾದ ನಂತರ ಹಣಕಾಸಿನ ವ್ಯವಸ್ಥೆ ಮಾಡಲು ಬೆಂಗಳೂರಿಗೆ ತೆರಳುತ್ತಿರುವುದಾಗಿ ಹೇಳಿದರು, ನಂತರ ರಾತ್ರಿ 10.30ಕ್ಕೆ ಕರೆ ಮಾಡಿ ಬೆಳಗ್ಗೆ ಬರುವುದಾಗಿ ಹೇಳಿದ್ದರು ಎಂದು ರುದ್ರೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT