ಎಂ ರುದ್ರೇಶ್ 
ರಾಜಕೀಯ

ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್​ ರಾಜೀನಾಮೆ ಸಾಧ್ಯತೆ

ಎರಡು ದಿನದ ಹಿಂದಷ್ಟೇ ರಾಮನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್​. ಚಂದ್ರಶೇಖರ್ ...

ಬೆಂಗಳೂರು: ಎರಡು ದಿನದ ಹಿಂದಷ್ಟೇ ರಾಮನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್​. ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದು  ಜೆಡಿಎಸ್​ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಕಮಲಕ್ಕೆ  ಶಾಕ್​ ನೀಡಿದ್ದರು. ಈಗ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್​ ಅವರೂ ಕೂಡ ಪಕ್ಷ ಬಿಡುವ ಸುಳಿವು ನೀಡಿದ್ದಾರೆ.
ಚಂದ್ರಶೇಖರ್ ಕಣದಿಂದ ಹಿಂದೆ ಸರಿದಿದ್ದರಿಂದ ತೀವ್ರ ಬೇಸರಗೊಂಡಿರುವ ರುದ್ರೇಶ್ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. 
ಈ ಸಂಬಂಧ ನಾಳೆ ಸುದ್ದಿಗೋಷ್ಠಿ ಕರೆದಿರುವ ರುದ್ರೇಶ್​ ಅವರು, ರಾಜೀನಾಮೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಸೇರಿದ ನಂತರ ಯಾವೊಬ್ಬ ಬಿಜೆಪಿ ಮುಖಂಡರೂ ಸಹ ರಾಮನಗರದತ್ತ ತಲೆ ಹಾಕಿಲ್ಲ, ಇಲ್ಲಿನ ಕಾರ್ಯಕರ್ತರ ಅಳಲು ಕೇಳಿಲ್ಲ. ನಮ್ಮನ್ನು ಒಂಟಿ ಮಾಡಲಾಗಿದೆ ಎಂಬುದು ರುದ್ರೇಶ್  ಅವರ ನೋವು. ಹೀಗಾಗಿ ನಾಳೆ ಸುದ್ದಿಗೋಷ್ಠಿ ನಡೆಸಿ ನಾಯಕರ ನಡೆ ಬಗ್ಗೆ ವಿವರಣೆ ನೀಡಿ, ಜಿಲ್ಲಾಧ್ಯಕ್ಷ ಸ್ಥಾನ ತ್ಯಜಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel