ಹುಬ್ಬಳ್ಳಿ: ರಾಮನಗರ ಘಟನೆಗೆ ಇಡೀ ರಾಜ್ಯ ಬಿಜೆಪಿ ಘಟಕ ಜವಾಬ್ದಾರಿಯಾಗಿದ್ದು, ಇದರಿಂದ ಬಿಜೆಪಿ ಪಾಠ ಕಲಿತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಶನಿವಾರ ವಿಶೇಷ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್ ಈ ಘಟನೆಗೆ ಯಾವುದೇ ಒಬ್ಬ ವ್ಯಕ್ತಿ ಕಾರಣವಲ್ಲ, ಇದು ಸಾಮೂಹಿಕ್ ಹೊಣೆಗಾರಿಕೆ, ಇಡೀ ಬಿಜೆಪಿ ರಾಜ್ಯ ಘಟಕ ಇದರ ಜವಾಬ್ದಾರಿ ಹೊರಬೇಕು ಎಂದು ಹೇಳಿದ್ದಾರೆ.
ಈ ಮೊದಲು ಪಕ್ಷ ಅಲ್ಲಿ ನಿಷ್ಠಾವಂತರನ್ನು ಗುರುತಿಸಲು ವಿಫಲವಾಯಿತು,.ಕರ್ನಾಟಕದ ಚುನಾವಣೆಯ ಇತಿಹಾಸದಲ್ಲಿ ಎಂದಿಗೂ ಈ ರೀತಿ
ಆಗಿರಲಿಲ್ಲ, ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜಕೀಯವನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿವೆ.
ಈ ರೀತಿಯ ಅಭ್ಯರ್ಥಿಗಳ ಬಗ್ಗೆ ಭವಿಷ್ಯದಲ್ಲಿ ನಾವು ಎಚ್ಚರಿಕೆಯಿಂದ ಇರುತ್ತೇವೆ,ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಭವಿಷ್ಯದಲ್ಲಿ ಇದೇ ರೀತಿಯ ಪರಿಸ್ಥಿತಿ ಅನುಭವಿಸಲಿವೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಸಾವಿರಾರು ಕಾರ್ಯಕರ್ತರು ರಾಮನಗರದಲ್ಲಿ ಪ್ರಚಾರ ಕೈಗೊಂಡಿದ್ದರು. ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸುತ್ತಿದ್ದರು ಆದರೆ ಕಾಣವಿಲ್ಲದೇ ಅವರು ಪಕ್ಷಾಂತರ ಮಾಡಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos