ಸಾಂದರ್ಭಿಕ ಚಿತ್ರ 
ರಾಜಕೀಯ

ಬಳ್ಳಾರಿ ಲೋಕಸಭೆ ಉಪಚುನಾವಣೆ: ಖಾಲಿ ಕೊಡ ಪ್ರದರ್ಶಿಸಿ ಗ್ರಾಮಸ್ಥರ ಪ್ರತಿಭಟನೆ, ಮತದಾನಕ್ಕೆ ಬಹಿಷ್ಕಾರ

ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ ಮತದಾನ ಬಹಿಷ್ಕರಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹರಗಿನದೋಣಿ ...

ಬಳ್ಳಾರಿ: ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ ಮತದಾನ ಬಹಿಷ್ಕರಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹರಗಿನದೋಣಿ ಗ್ರಾಮದಲ್ಲಿ ನಿನ್ನೆ ನಡೆದಿದೆ.

ಈ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ಸಮಯಗಳಿಂದ ಇದ್ದು ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ನಿನ್ನೆ ಬಳ್ಳಾರಿ ಲೋಕಸಭೆ ಉಪ ಚುನಾವಣೆ ವೇಳೆ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಟ್ಯಾಂಕರ್ ಮೂಲಕ ನೀರು ಪೂರೈಸಿದರೂ ಕೂಡ ಅದು ಗ್ರಾಮಸ್ಥರಿಗೆ ಸಾಕಾಗಲಿಲ್ಲ.

ನಮ್ಮ ಗ್ರಾಮದಲ್ಲಿರುವ ಬಹುತೇಕ ಬೋರ್ ವೆಲ್ ಗಳು ಬತ್ತಿ ಹೋಗಿವೆ. ನೀರು ಇರುವ ಬೋರ್ ವೆಲ್ ಗಳಲ್ಲಿ ಅಧಿಕ ಫ್ಲೋರೈಡ್ ಗಳಿವೆ. ಅದು ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ತಮ್ಮ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಮಾಡುವುದಿಲ್ಲ ಎಂದು ಕಳೆದ ನಾಲ್ಕೈದು ದಿನಗಳಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಅವರ ಎಚ್ಚರಿಕೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ನಿನ್ನೆ ಮತದಾನ ದಿನ ನೂರಾರು ಮಹಿಳೆಯರು ಖಾಲಿ ಕೊಡ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.

ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ನಿನ್ನೆ ನಡೆದ ಉಪ ಚುನಾವಣೆಯಲ್ಲಿ ಶ್ರೀರಾಮುಲು ಸೋದರಿ ಜೆ ಶಾಂತ ಬಿಜೆಪಿಯಿಂದ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ವಿ ಎಸ್ ಉಗ್ರಪ್ಪ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT