ಹೆಚ್ ಡಿ ರೇವಣ್ಣ, ಸಚಿವೆ ಜಯಮಾಲಾ 
ರಾಜಕೀಯ

ಹೆಚ್ ಡಿ ರೇವಣ್ಣ ಬದುಕಿರುವವರೆಗೂ ಶಾಸಕರಾಗಿರುತ್ತಾರೆ: ಸಚಿವೆ ಜಯಮಾಲಾ

ಲೋಕೋಪಯೋಗಿ ಇಲಾಖೆ ಸಚಿವ ಹೆಚ್ ಡಿ ರೇವಣ್ಣ ಬದುಕಿರುವವರೆಗೂ ಶಾಸಕರಾಗಿರುತ್ತಾರೆ ಎಂದು ಕನ್ನಡ...

ಶ್ರವಣಬೆಳಗೊಳ: ಲೋಕೋಪಯೋಗಿ ಇಲಾಖೆ ಸಚಿವ ಹೆಚ್ ಡಿ ರೇವಣ್ಣ ಬದುಕಿರುವವರೆಗೂ ಶಾಸಕರಾಗಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಪರ ಮಾತನಾಡುವ ಮೂಲಕ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ, ಮುಜುಗರ ಉಂಟುಮಾಡಿದ್ದಾರೆ.

ನಿನ್ನೆ ಶ್ರವಣಬೆಳಗೊಳದ ಚಾವುಂಡರಾಯ ಸಭಾ ಮಂಟಪದಲ್ಲಿ ನಡೆದ ಮುನಿ ಚಾರುಕೀರ್ತ ಭಟ್ಟಾರಕ ಸ್ವಾಮಿಗೆ ಭಗವಾನ್ ಮಹಾವೀರ ಶಾಂತಿ ಪುರಸ್ಕಾರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ರೇವಣ್ಣ ಹಾಸನ ಜಿಲ್ಲೆಯ ಜನತೆಗೆ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದಾರೆ, ಅದು ಇಲ್ಲಿಗೆ ಬಂದು ನೋಡಿದರೆ ಗೊತ್ತಾಗುತ್ತದೆ, ಅವರು ಅನೇಕ ಉತ್ತಮ ಕೆಲಸಗಳನ್ನು ಮಾಡಿ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಿಕೊಂಡಿದ್ದಾರೆ ಎಂದು ಹಾಡಿಹೊಗಳಿದ್ದಾರೆ.

ಅದು ಸರ್ಕಾರದ ಕೆಲಸವಾಗಿರಲಿ, ಕ್ಷೇತ್ರದ ಜನತೆಯ ಕೆಲಸವಾಗಿರಲಿ ಸಚಿವ ರೇವಣ್ಣನವರು ಉತ್ತಮ ಕೆಲಸ ಮಾಡುತ್ತಾರೆ. ತಮ್ಮ ಕ್ಷೇತ್ರಗಳಲ್ಲಿ ಸ್ವಚ್ಛತೆಗೆ, ಕುಡಿಯುವ ನೀರು, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ, ಅವರ ಕೆಲಸವೇ ಇಂದು ಅವರನ್ನು ಈ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಅವರಿಗೆ ಮಹಿಳೆಯರು, ಮಕ್ಕಳ ಬಗ್ಗೆಯೂ ವಿಶೇಷ ಅನುಭೂತಿಯಿದೆ ಎಂದರು.

ರೇವಣ್ಣನವರು ತಮಗೆ ಸಂಬಂಧಪಡದ ಬೇರೆ ಇಲಾಖೆಗಳ ವಿಚಾರಗಳಲ್ಲಿ ಸಹ ಮೂಗು ತೂರಿಸುತ್ತಾರೆ ಎಂಬ ಕೆಲ ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಚಿವೆ ಜಯಮಾಲಾ ಟಾಂಗ್ ಕೊಟ್ಟಂತಿದೆ ಅವರ ಈ ಮಾತು. ಕಾರ್ಯಕ್ರಮದಲ್ಲಿ ಸ್ವತಃ ಹೆಚ್ ಡಿ ರೇವಣ್ಣ ಕೂಡ ಉಪಸ್ಥಿತರಿದ್ದರು. ಸಚಿವೆ ಜಯಮಾಲಾ ಹೇಳಿಕೆ ಮುಂದಿನ ದಿನಗಳಲ್ಲಿ ವಿವಾದ, ಭಿನ್ನಾಭಿಪ್ರಾಯ ಹುಟ್ಟುಹಾಕುವ ಸಾಧ್ಯತೆಯಿದೆ.

ಸರ್ಕಾರದ ಸನ್ಮಾನ ಸ್ವೀಕರಿಸಿ ಮಾತನಾಡಿದ ಚಾರುಕೀರ್ತಿ ಭಟ್ಟಾಚಾರ್ಯ, ಸಮಾಜದಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಇನ್ನಷ್ಟು ಕೆಲಸಗಳಾಗಬೇಕಿದೆ. ಈ ಪ್ರಶಸ್ತಿ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಶಾಂತಿ ಸ್ಥಾಪನೆಗೆ ನನಗೆ ಸಿಕ್ಕಿದ 10 ಲಕ್ಷ ರೂಪಾಯಿಗಳನ್ನು ವಿನಿಯೋಗಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT