ಮಾಜಿ ಸಚಿವ ಎ ಮಂಜು ಮತ್ತು ಜಯಮಾಲಾ (ಸಂಗ್ರಹ ಚಿತ್ರ) 
ರಾಜಕೀಯ

ಜಯಮಾಲಾ ಸಚಿವೆಯಾಗುವುದಕ್ಕೆ ನಾಲಾಯಕ್: ಎ ಮಂಜು ಆಕ್ರೋಶ

ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಸಚಿವೆ ಜಯಮಾಲಾ ಹೊಗಳಿರುವುದು ಇದೀಗ ...

ಹಾಸನ: ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಸಚಿವೆ ಜಯಮಾಲಾ ಹೊಗಳಿರುವುದು ಇದೀಗ ಹಾಸನ ಜಿಲ್ಲೆಯ ಕಾಂಗ್ರೆಸ್ ನಾಯಕರ ಸಿಟ್ಟು, ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಜಿಲ್ಲೆಯ ಕಾಂಗ್ರೆಸ್ ನಾಯಕ ಎ ಮಂಜು, ಸಚಿವೆ ಜಯಮಾಲಾ ಶ್ರವಣಬೆಳಗೊಳಕ್ಕೆ ಬಂದಿರುವುದು ಸರ್ಕಾರದ ಕಾರ್ಯಕ್ರಮಕ್ಕಾಗಿ ಸಚಿವೆಯಾಗಿ, ಅಲ್ಲಿಗೆ ಬಂದಿರುವ ಪ್ರಸ್ತುತತೆಯನ್ನು ಅವರು ಅರ್ಥ ಮಾಡಿಕೊಂಡು ಅಷ್ಟು ಕೆಲಸ ಮಾಡಿ ಹೋಗಬೇಕಿತ್ತು. ಅದು ಬಿಟ್ಟು ಸಚಿವ ರೇವಣ್ಣನವರ ಏಜೆಂಟರಾಗಿ ಅಲ್ಲಿಗೆ ಬಂದಿದ್ದಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವೆಂದರೆ ಸಿನಿಮಾವಲ್ಲ, ಸಿನಿಮಾದಲ್ಲಿ ಡೈಲಾಗ್ ಹೊಡೆದ ರೀತಿ ಇಲ್ಲಿ ಮಾತನಾಡಲಾಗುವುದಿಲ್ಲ, ಸಿನಿಮಾದಲ್ಲಿ ತಾವು ಎವರ್ ಗ್ರೀನ್ ತಾರೆ ಎಂದು ಅವರು ಹೇಳಿಕೊಳ್ಳಬಹುದು. ಆದರೆ ರಾಜಕೀಯದಲ್ಲಿ ಅವೆಲ್ಲ ನಡೆಯುವುದಿಲ್ಲ, ಇಂಥ ಅನನುಭವಿಗಳು ಮಂತ್ರಿಯಾಗುವುದಕ್ಕೆ ನಾಲಾಯಕ್, ಕಾಂಗ್ರೆಸ್ ನಲ್ಲಿದ್ದುಕೊಂಡು ಅವರು ಈ ರೀತಿ ಹೇಳಿಕೆ ನೀಡುವುದು ಪಕ್ಷಕ್ಕೆ ಅವಮಾನ ಮಾಡಿದಂತೆ ಎಂದು ಟೀಕಿಸಿದ್ದಾರೆ.

ಸಚಿವೆ ಜಯಮಾಲಾ ಹೇಳಿರುವುದನ್ನು ಇಲ್ಲಿಗೆ ಸುಮ್ಮನೆ ಬಿಡುವುದಿಲ್ಲ, ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಒತ್ತಾಯಿಸುತ್ತೇವೆ, ರಾಜ್ಯದ ಮಂತ್ರಿಯಾಗಿ ಅವರು ಈ ರೀತಿ ಮಾತನಾಡುವುದು ಶುದ್ಧ ತಪ್ಪು, ಈ ಬಗ್ಗೆ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಎ ಮಂಜು ಸಚಿವೆ ಜಯಮಾಲಾ ಅವರನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT