ಹಾಸನ: ಅಧಿದೇವತೆ ಹಾಸನಾಂಬೆಯ ಆರ್ಶೀವಾದದಿಂದ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ, ನನಗೆ ದೇವರ ಮೇಲೆ ಅತೀವ ನಂಬಿಕೆ ಇದೆ. ಹೀಗಾಗಿ ಪ್ರತಿ ವರ್ಷ ಇಲ್ಲಿಗೆ ಬರುತ್ತೇನೆ. ಕುಮಾರಸ್ವಾಮಿ ಅವರಿಗೆ ಸಿಕ್ಕಿರುವ ಸಿಎಂ ಸ್ಥಾನ ಉಳಿಸುವ ಎಂದು ಬೇಡಿಕೊಂಡಿದ್ದೇನೆ. ಹಾಗೆಯೇ ನಾಡಿನ ಜನರಿಗೆ ಸುಖ, ಶಾಂತಿ ಸಿಗಲಿ. ರೈತರ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ಇದೇ ವೇಳೆ ರಾಮನಗರ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿ ಅವರು, ಉಳಿದ ನಾಲ್ಕು ಕ್ಷೇತ್ರಗಳಲ್ಲೂ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದರು.