ಅನಿತಾ ಕುಮಾರಸ್ವಾಮಿ 
ರಾಜಕೀಯ

ರಾಮನಗರದಲ್ಲಿ ಮತ ಎಣಿಕೆಗೆ ಮುನ್ನವೇ ಗೆದ್ದ ಅನಿತಾ ಕುಮಾರಸ್ವಾಮಿ!

ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.

ರಾಮನಗರ: ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ. 
ದೀಪಾವಳಿಯ ದಿನವೇ ಪ್ರಕಟವಾಗುತ್ತಿರುವ ಫಲಿತಾಂಶದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎಂದು ಇನ್ನೂ ನಿರ್ಧರಿಸಬೇಕಾಗಿದೆ. ಆದರೆ ಈ ನಡುವೆ ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ಬ್ಯಾನರ್ ಹಾಕಲಾಗಿದೆ!
ಮತ ಎಣಿಕೆಗೆ ಮುನ್ನವೇ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ನಗರದ ಅಲ್ಲಲ್ಲಿ ಬ್ಯಾನರ್ ಹಾಕಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ  ಗೆದ್ದಿದ್ದಾರೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.ಜೆಡಿಎಸ್ ಕಾರ್ಯಕರ್ತರು ಮತ ಎಣಿಕೆಯ ಮುನ್ನವೇ ಬ್ಯಾನರ್ ತಯಾರಿಸಿ ಅಲ್ಲಲ್ಲಿ ಪ್ರದರ್ಶಿಸಿದ್ದಾರೆ.
ರಾಮನಗರದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆದಿದ್ದು ಶೇ. 71.88 ಮತದಾನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT