ರಾಜಕೀಯ

ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಗುರಿ- ಅನಿತಾ ಕುಮಾರಸ್ವಾಮಿ

Nagaraja AB

ರಾಮನಗರ: ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಉಪಚುನಾವಣೆ ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅನಿತಾ ಕುಮಾರಸ್ವಾಮಿ, 12 ವರ್ಷದಿಂದ ಜೆಡಿಎಸ್  ಪಕ್ಷ ಅಧಿಕಾರದಲ್ಲಿ ಇಲ್ಲದೆ ಇದುದ್ದರಿಂದ ಅಭಿವೃದ್ದಿ ಕಾರ್ಯಗಳಿಗೆ ತೊಡಕಾಗಿತ್ತು. ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದರಿಂದ ಮತ್ತಷ್ಟು ಅಭಿವೃದ್ದಿ ಕಾರ್ಯಗಳು ತ್ವರಿತಗತಿಯಲ್ಲಿ ಆಗಲು ಸಾಧ್ಯವಾಗಿದೆ ಎಂದರು.
SCROLL FOR NEXT