ವಿಎಸ್ ಉಗ್ರಪ್ಪ 
ರಾಜಕೀಯ

ಸರ್ವಾಧಿಕಾರಿ ಧೋರಣೆಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಉಗ್ರಪ್ಪ ವಾಗ್ದಾಳಿ

ಲೋಕಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ಶ್ರೀರಾಮುಲು ಸಹೋದರಿ ಶಾಂತ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು...

ಬೆಂಗಳೂರು: ಲೋಕಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ಶ್ರೀರಾಮುಲು ಸಹೋದರಿ ಶಾಂತ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 
ಚುನಾವಣೆಯಲ್ಲಿ ಗೆದ್ದ ಬಳಿಕ ಮಾತನಾಡಿದ ಉಗ್ರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಮತದಾರರು ವಿಶ್ವಾಸವಿಟ್ಟು ನನಗೆ ಮತ ನೀಡಿದ್ದಾರೆ. ಬಳ್ಳಾರಿ ಜನತೆಯ ನೈಜಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ. ಸರ್ವಾಧಿಕಾರಿ ಧೋರಣೆ ತೋರುತ್ತಿದ್ದವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಮತದಾರರ ತೀರ್ಪು ಮುಂದಿನ ಲೋಕಸಭಾ ಚುನಾವಣೆಗೆ ದಾರಿ ದೀಪವಾಗಲಿದೆ ಎಂದರು. 
ಜನವಿರೋಧಿ ಪ್ರವೃತ್ತಿ ತೋರುವವರಿಗೆ ಸೋಲಾಗಿದೆ. ಜಿಎಸ್ ಟಿ, ನೋಟ್ ಬ್ಯಾನ್ ನಿಂದ ದೇಶದ ಜನತೆಗೆ ಸಂಕಷ್ಟ ಎದುರಿಸಿದ್ದಾರೆ. ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರಿಂದ ಬೇಸತ್ತು ಮತದಾರರು ಕಾಂಗ್ರೆಸ್ ಗೆ ಮತ ಗೆಲ್ಲಿಸಿದ್ದಾರೆ ಎಂದರು.
ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು 5,88,863 ಮತ ಗಳಿಸಿದರೆ ಬಿಜೆಪಿ ಅಭ್ಯರ್ಥಿ ಜೆ ಶಾಂತ ಅವರು 3,60,608 ಮತಗಳನ್ನು ಪಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT