ಮೈಸೂರು ಭಾಗದಲ್ಲಿ ಕಮಲ ಅರಳುವ ಸೂಚನೆ 
ರಾಜಕೀಯ

ಮಂಡ್ಯ ಬಿಜೆಪಿ ಅಭ್ಯರ್ಥಿಗೆ ಗಣನೀಯ ಮತ ಚಲಾವಣೆ: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳುವ ಸೂಚನೆ!

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದೆ. ಆದರೆ ಪಕ್ಷದ ಅಭ್ಯರ್ಥಿ ಹಿಂದೆಂದಿಗಿಂತಲೂ ಅಧಿಕ ಮತ ಪಡೆದಿದ್ದು, ಜೆಡಿಎಸ್ -ಕಾಂಗ್ರೆಸ್ ಪ್ರಾಬಲ್ಯವಿರುವ ಹಳೇ .,..

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದೆ. ಆದರೆ ಪಕ್ಷದ ಅಭ್ಯರ್ಥಿ ಹಿಂದೆಂದಿಗಿಂತಲೂ ಅಧಿಕ ಮತ ಪಡೆದಿದ್ದು, ಜೆಡಿಎಸ್ -ಕಾಂಗ್ರೆಸ್ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಸ್ವಲ್ಪ ಮಟ್ಟಿನ ಭರವಸೆ ಮೂಡಿಸಿದೆ.
ಈ ಹಿಂದಿನ ಎಲ್ಲಾ ಚುನಾವಣೆಗಳಲ್ಲಿ  ಬಿಜೆಪಿ 80 ಸಾವಿರ ಮತಗಳಿಗಿಂತ ಮೀರುತ್ತಿರಲಿಲ್ಲ, ಆದರೆ ಈ ಬಾರಿಯ ಚುನಾವಣೆಯಲ್ಲಿ 2.44 ಲಕ್ಷ  ಮತ ಪಡೆದಿರುವುದು  ರಾಜಕೀಯ ವೀಕ್ಷಕರನ್ನು ದಂಗಾಗಿಸಿದೆ. ಹೀಗಾಗಿ  ಮುಂಬರುವ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧಪಡಿಸಿಕೊಡುತ್ತಿದೆ.
ಕಾಂಗ್ರೆಸ್ ಭಿನ್ನಮತೀಯರು ಮತ್ತು ರೈತಸಂಘಕ್ಕೆ ಬಿಜೆಪಿ ಪರ್ಯಾಯವಾಗಿದೆ ಎಂದು ಹೇಳಲಾಗಿದೆ,ಮೇಲುಕೋಟೆ, ಮಳವಳ್ಳಿ, ಶ್ರೀರಂಗಪಟ್ಟಣ, ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 23 ಸಾವಿರ ಮತಗಳು ಚಲಾವಣೆಯಾಗಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮಂಡ್ಯದಲ್ಲಿ ಬಿಜೆಪಿಗೆ ವರವಾಗಿದೆ, ಕೇವಲ ಮಂಡ್ಯ ಮಾತ್ರವಲ್ಲ, ಹಾಸನ, ಚಾಮರಾಜನಗರ. ಮೈಸೂರು ಮತ್ತು ಕೊಡಗು ಲೋಕಸಭೆ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳ ಒಡಕು ಬಿಜೆಪಿಗೆ ಲಾಭವಾಗಲಿದೆ ಎಂದು ರಾಜಕೀಯ ವಿಮರ್ಶಕರ ಅಭಿಪ್ರಯವಾಗಿದೆ.
ಈ ಹಿಂದೆ ಬಿಜೆಪಿ ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗಿತ್ತು. ವಿರೋಧ ಪಕ್ಷಗಳ ಕಾರ್ಯಕರ್ತರ ಭಿನ್ನಭಿಪ್ರಾಯ, ದ್ವೇಷ ಬಿಜೆಪಿಗೆ ಬಂಡವಾಳವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT