ಮೈಸೂರು ಭಾಗದಲ್ಲಿ ಕಮಲ ಅರಳುವ ಸೂಚನೆ 
ರಾಜಕೀಯ

ಮಂಡ್ಯ ಬಿಜೆಪಿ ಅಭ್ಯರ್ಥಿಗೆ ಗಣನೀಯ ಮತ ಚಲಾವಣೆ: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳುವ ಸೂಚನೆ!

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದೆ. ಆದರೆ ಪಕ್ಷದ ಅಭ್ಯರ್ಥಿ ಹಿಂದೆಂದಿಗಿಂತಲೂ ಅಧಿಕ ಮತ ಪಡೆದಿದ್ದು, ಜೆಡಿಎಸ್ -ಕಾಂಗ್ರೆಸ್ ಪ್ರಾಬಲ್ಯವಿರುವ ಹಳೇ .,..

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದೆ. ಆದರೆ ಪಕ್ಷದ ಅಭ್ಯರ್ಥಿ ಹಿಂದೆಂದಿಗಿಂತಲೂ ಅಧಿಕ ಮತ ಪಡೆದಿದ್ದು, ಜೆಡಿಎಸ್ -ಕಾಂಗ್ರೆಸ್ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಸ್ವಲ್ಪ ಮಟ್ಟಿನ ಭರವಸೆ ಮೂಡಿಸಿದೆ.
ಈ ಹಿಂದಿನ ಎಲ್ಲಾ ಚುನಾವಣೆಗಳಲ್ಲಿ  ಬಿಜೆಪಿ 80 ಸಾವಿರ ಮತಗಳಿಗಿಂತ ಮೀರುತ್ತಿರಲಿಲ್ಲ, ಆದರೆ ಈ ಬಾರಿಯ ಚುನಾವಣೆಯಲ್ಲಿ 2.44 ಲಕ್ಷ  ಮತ ಪಡೆದಿರುವುದು  ರಾಜಕೀಯ ವೀಕ್ಷಕರನ್ನು ದಂಗಾಗಿಸಿದೆ. ಹೀಗಾಗಿ  ಮುಂಬರುವ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧಪಡಿಸಿಕೊಡುತ್ತಿದೆ.
ಕಾಂಗ್ರೆಸ್ ಭಿನ್ನಮತೀಯರು ಮತ್ತು ರೈತಸಂಘಕ್ಕೆ ಬಿಜೆಪಿ ಪರ್ಯಾಯವಾಗಿದೆ ಎಂದು ಹೇಳಲಾಗಿದೆ,ಮೇಲುಕೋಟೆ, ಮಳವಳ್ಳಿ, ಶ್ರೀರಂಗಪಟ್ಟಣ, ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 23 ಸಾವಿರ ಮತಗಳು ಚಲಾವಣೆಯಾಗಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮಂಡ್ಯದಲ್ಲಿ ಬಿಜೆಪಿಗೆ ವರವಾಗಿದೆ, ಕೇವಲ ಮಂಡ್ಯ ಮಾತ್ರವಲ್ಲ, ಹಾಸನ, ಚಾಮರಾಜನಗರ. ಮೈಸೂರು ಮತ್ತು ಕೊಡಗು ಲೋಕಸಭೆ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳ ಒಡಕು ಬಿಜೆಪಿಗೆ ಲಾಭವಾಗಲಿದೆ ಎಂದು ರಾಜಕೀಯ ವಿಮರ್ಶಕರ ಅಭಿಪ್ರಯವಾಗಿದೆ.
ಈ ಹಿಂದೆ ಬಿಜೆಪಿ ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗಿತ್ತು. ವಿರೋಧ ಪಕ್ಷಗಳ ಕಾರ್ಯಕರ್ತರ ಭಿನ್ನಭಿಪ್ರಾಯ, ದ್ವೇಷ ಬಿಜೆಪಿಗೆ ಬಂಡವಾಳವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT