ಬಿಎಸ್ ಯಡಿಯೂರಪ್ಪ, ಸಂತೋಷ್ 
ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಅನಂತ್ ಕುಮಾರ್ ಸ್ಥಾನ ತುಂಬುತ್ತಾರಾ ಬಿಎಲ್ ಸಂತೋಷ್?

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ...

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅಗಲಿಕೆ ರಾಜ್ಯ ಬಿಜೆಪಿ ಘಟಕಕ್ಕೆ ತುಂಬಲಾರದ ನಷ್ಟವಾಗಿದೆ. 
ಅತ್ಯಂತ ಕಡಿಮೆ ಅವಧಿಯಲ್ಲೇ ಅನಂತ್ ಕುಮಾರ್ ಅವರ ಸ್ಥಾನ ತುಂಬುವಂತಹ ಪ್ರಭಾವಿ, ಆರ್ ಎಸ್ ಎಸ್ ಒಪ್ಪಿಕೊಳ್ಳುವಂತಹ ವ್ಯಕ್ತಿಯ ಹುಡುಕಾಟದಲ್ಲಿರುವ ಕೇಸರಿ ಪಡೆಯ ಕಣ್ಣು ಸದ್ಯ ಆರ್ ಎಸ್ ಎಸ್ ವ್ಯಕ್ತಿ ಬಿಎಲ್ ಸಂತೋಷ್ ಅವರ ಮೇಲೆ ಬಿದ್ದಿದೆ. 
ಬಿಎಲ್ ಸಂತೋಷ್ ಅವರು ಈಗ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿದ್ದು, ಅವರನ್ನು ಪಕ್ಷ ಸಂಘಟನೆ ಕಾರ್ಯದಿಂದ ಮುಕ್ತಗೊಳಿಸಿ ಸಕ್ರಿಯೆ ರಾಜಕೀಯಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ಮಾತ್ರವಲ್ಲ ಸಂಘದಲ್ಲೂ ಎರಡು ಹುದ್ದೆಯನ್ನು ಹೊಂದುವಂತಿಲ್ಲ. ಸಂತೋಷ್ ಅವರು ಸದ್ಯ ಸಂಘಟನಾ ಜವಾಬ್ದಾರಿ ಹೊಂದಿದ್ದಾರೆ. ಅವರಿಗೆ ಯಾವುದೇ ರಾಜಕೀಯ ಜವಾಬ್ದಾರಿ ನೀಡಿಲ್ಲ. ಸದ್ಯದಲ್ಲೇ ಅವರಿಗೆ ಹೊಸ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಅಂದು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಬಿಎಲ್ ಸಂತೋಷ್ ನಡುವೆ ತಿಕ್ಕಾಟ ನಡೆದಿತ್ತು. ಬೆಳವಣಿಗೆಗಳ ನಂತರ ಸಂತೋಷ್ ಅವರನ್ನು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ಉಸ್ತುವಾರಿ ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT