ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅಗಲಿಕೆ ರಾಜ್ಯ ಬಿಜೆಪಿ ಘಟಕಕ್ಕೆ ತುಂಬಲಾರದ ನಷ್ಟವಾಗಿದೆ.
ಅತ್ಯಂತ ಕಡಿಮೆ ಅವಧಿಯಲ್ಲೇ ಅನಂತ್ ಕುಮಾರ್ ಅವರ ಸ್ಥಾನ ತುಂಬುವಂತಹ ಪ್ರಭಾವಿ, ಆರ್ ಎಸ್ ಎಸ್ ಒಪ್ಪಿಕೊಳ್ಳುವಂತಹ ವ್ಯಕ್ತಿಯ ಹುಡುಕಾಟದಲ್ಲಿರುವ ಕೇಸರಿ ಪಡೆಯ ಕಣ್ಣು ಸದ್ಯ ಆರ್ ಎಸ್ ಎಸ್ ವ್ಯಕ್ತಿ ಬಿಎಲ್ ಸಂತೋಷ್ ಅವರ ಮೇಲೆ ಬಿದ್ದಿದೆ.
ಬಿಎಲ್ ಸಂತೋಷ್ ಅವರು ಈಗ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿದ್ದು, ಅವರನ್ನು ಪಕ್ಷ ಸಂಘಟನೆ ಕಾರ್ಯದಿಂದ ಮುಕ್ತಗೊಳಿಸಿ ಸಕ್ರಿಯೆ ರಾಜಕೀಯಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ಮಾತ್ರವಲ್ಲ ಸಂಘದಲ್ಲೂ ಎರಡು ಹುದ್ದೆಯನ್ನು ಹೊಂದುವಂತಿಲ್ಲ. ಸಂತೋಷ್ ಅವರು ಸದ್ಯ ಸಂಘಟನಾ ಜವಾಬ್ದಾರಿ ಹೊಂದಿದ್ದಾರೆ. ಅವರಿಗೆ ಯಾವುದೇ ರಾಜಕೀಯ ಜವಾಬ್ದಾರಿ ನೀಡಿಲ್ಲ. ಸದ್ಯದಲ್ಲೇ ಅವರಿಗೆ ಹೊಸ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಅಂದು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಬಿಎಲ್ ಸಂತೋಷ್ ನಡುವೆ ತಿಕ್ಕಾಟ ನಡೆದಿತ್ತು. ಬೆಳವಣಿಗೆಗಳ ನಂತರ ಸಂತೋಷ್ ಅವರನ್ನು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ಉಸ್ತುವಾರಿ ನೀಡಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos