ಜನಾರ್ಧನ ರೆಡ್ಡಿ 
ರಾಜಕೀಯ

ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಜನಾರ್ಧನ ರೆಡ್ಡಿಯ ಈ ಹೇಳಿಕೆ!

ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ...

ಬೆಂಗಳೂರು: ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ ಅಪದ್ಧ ಹೇಳಿಕೆಗಳು ಕಾರಣ ಎಂದು ಹೇಳಲಾಗುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾಪಗಳಿಂದಾಗಿ ಅವರ ಮಗ  ರಾಕೇಶ್ ಸಿದ್ದರಾಮಯ್ಯ ಸತ್ತ ಎಂದು  ಜನಾರ್ದನ ರೆಡ್ಡಿ ಹೇಳಿದ್ದಾರೆ. ಇನ್ನೂ ಬಳ್ಳಾರಿ ಅಭ್ಯರ್ಥಿ ಜೆ.ಶಾಂತಾ ಅವರ ಪರ ಪ್ರಚಾರ ಮಾಡುವಾಗ ವಿ. ಸೋಮಣ್ಣ, ನಾಯಕ ಸಮುದಾಯದ ಮುಂದಿನ ಮುಖ್ಯಮಂತ್ರಿ ಶ್ರೀರಾಮುಲು ಅವರು ಎಂದು ಹೇಳಿಕೆ ನೀಡಿದ್ದರು. 
ಇತ್ತೀಚೆಗೆ ನಡೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ಹಾಗೂ ತಪ್ಪುಗಳನ್ನು ಬಿಜೆಪಿ ಪರಾಮರ್ಶಿಸಿದ್ದು, ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಬದಿಗೊತ್ತುತ್ತಿರುವುದನ್ನು ವಿರೋಧಿಸಿರುವ ಲಿಂಗಾಯತರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ, 
ಹಾಗೆಯೇ ಜನಾರ್ದನ ರೆಡ್ಡಿ ನೀಡಿದ ಹೇಳಿಕೆ ಕೇವಲ ಕುರುಬ ಮತದಾರರು ಮಾತ್ರವಲ್ಲ,  ಕಾಂಗ್ರೆಸ್ ಗೆ ನಾಯಕ ಸಮುದಾಯದವರ ಮತಗಳನ್ನು ಸೆಳೆಯಲು ಕಾರಣವಾಯಿತು, ಜೊತೆಗೆ ಬಳ್ಳಾರಿಯಲ್ಲಿ ಶ್ರೀರಾಮುಲು ಒನ್ ಮ್ಯಾನ್ ಶೋ ಕೂಡ ಸೋಲಿಗೆ ಕಾರಣ ಎಂದು ಹೇಳಲಾಗಿದೆ.
ಆದರೆ ಮಂಡ್ಯ ಲೋಕಸಬೆ ಕ್ಷೇತ್ರದಲ್ಲಿ ಬಿಜೆಪಿ ಗಣನೀಯ ಸಾಧನೆ ಮಾಡಿದೆ,.ಹೊಸ ಮುಖ ಡಾ.,ಸಿದ್ದರಾಮಯ್ಯ ಮಂಡ್ಯ ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ ಎಂದು ಬಿಜೆಪಿ ಆಂತರಿಕ ವರದಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT