ಜನಾರ್ಧನ ರೆಡ್ಡಿ 
ರಾಜಕೀಯ

ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಜನಾರ್ಧನ ರೆಡ್ಡಿಯ ಈ ಹೇಳಿಕೆ!

ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ...

ಬೆಂಗಳೂರು: ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ ಅಪದ್ಧ ಹೇಳಿಕೆಗಳು ಕಾರಣ ಎಂದು ಹೇಳಲಾಗುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾಪಗಳಿಂದಾಗಿ ಅವರ ಮಗ  ರಾಕೇಶ್ ಸಿದ್ದರಾಮಯ್ಯ ಸತ್ತ ಎಂದು  ಜನಾರ್ದನ ರೆಡ್ಡಿ ಹೇಳಿದ್ದಾರೆ. ಇನ್ನೂ ಬಳ್ಳಾರಿ ಅಭ್ಯರ್ಥಿ ಜೆ.ಶಾಂತಾ ಅವರ ಪರ ಪ್ರಚಾರ ಮಾಡುವಾಗ ವಿ. ಸೋಮಣ್ಣ, ನಾಯಕ ಸಮುದಾಯದ ಮುಂದಿನ ಮುಖ್ಯಮಂತ್ರಿ ಶ್ರೀರಾಮುಲು ಅವರು ಎಂದು ಹೇಳಿಕೆ ನೀಡಿದ್ದರು. 
ಇತ್ತೀಚೆಗೆ ನಡೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ಹಾಗೂ ತಪ್ಪುಗಳನ್ನು ಬಿಜೆಪಿ ಪರಾಮರ್ಶಿಸಿದ್ದು, ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಬದಿಗೊತ್ತುತ್ತಿರುವುದನ್ನು ವಿರೋಧಿಸಿರುವ ಲಿಂಗಾಯತರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ, 
ಹಾಗೆಯೇ ಜನಾರ್ದನ ರೆಡ್ಡಿ ನೀಡಿದ ಹೇಳಿಕೆ ಕೇವಲ ಕುರುಬ ಮತದಾರರು ಮಾತ್ರವಲ್ಲ,  ಕಾಂಗ್ರೆಸ್ ಗೆ ನಾಯಕ ಸಮುದಾಯದವರ ಮತಗಳನ್ನು ಸೆಳೆಯಲು ಕಾರಣವಾಯಿತು, ಜೊತೆಗೆ ಬಳ್ಳಾರಿಯಲ್ಲಿ ಶ್ರೀರಾಮುಲು ಒನ್ ಮ್ಯಾನ್ ಶೋ ಕೂಡ ಸೋಲಿಗೆ ಕಾರಣ ಎಂದು ಹೇಳಲಾಗಿದೆ.
ಆದರೆ ಮಂಡ್ಯ ಲೋಕಸಬೆ ಕ್ಷೇತ್ರದಲ್ಲಿ ಬಿಜೆಪಿ ಗಣನೀಯ ಸಾಧನೆ ಮಾಡಿದೆ,.ಹೊಸ ಮುಖ ಡಾ.,ಸಿದ್ದರಾಮಯ್ಯ ಮಂಡ್ಯ ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ ಎಂದು ಬಿಜೆಪಿ ಆಂತರಿಕ ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!