ರಾಮಲಿಂಗಾರೆಡ್ಡಿ, ಪ್ರಿಯಾ ಕೃಷ್ಣ 
ರಾಜಕೀಯ

ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದಿಂದ ರೆಡ್ಡಿ, ಪ್ರಿಯಾ ಕೃಷ್ಣ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

2019ರ ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ

ಬೆಂಗಳೂರು: 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹುಡುಕಾಟ ಪ್ರಕ್ರಿಯೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿ ಪಕ್ಷದ ಭದ್ರಕೋಟೆಯಾಗಿದ್ದು, ಈ ಕ್ಷೇತ್ರದಿಂದಲೇ ಅನಂತ ಕುಮಾರ್  ಸತತವಾಗಿ ಆರು ಬಾರಿಗೆ ಲೋಕಸಭೆಗೆ ಚುನಾಯಿತರಾಗಿದ್ದರು. ಅನಂತ ಕುಮಾರ್ ನಿಧನದ ನಂತರ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು  ಮುಂದಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ಇದೆ.

ಈ ಕ್ಷೇತ್ರದ ಸಂಬಂಧ ಕೆಲ ದಿನಗಳ ಹಿಂದೆ ಎಐಸಿಸಿ  ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ನಡೆಸಿದ ಸಭೆಯಲ್ಲಿ ರಾಮಲಿಂಗಾರೆಡ್ಡಿ, ಪ್ರಿಯಾಕೃಷ್ಣ ಹೆಸರು ಕೇಳಿಬಂದಿದೆ. ಆದಾಗ್ಯೂ, ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಪ್ರಿಯಾ ಕೃಷ್ಣ ವಿಧಾನಸಭಾ ಚುನಾವಣೆಯಲ್ಲಿ ಗೋವಿಂದ ರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ. ಪ್ರಿಯಾ ಕೃಷ್ಣ ತಂದೆ ಎಂ. ಕೃಷ್ಣಪ್ಪ ವಿಜಯನಗರದ ಶಾಸಕರಾಗಿದ್ದಾರೆ. ಈ ಮೂರು ಕ್ಷೇತ್ರಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಬರಲಿವೆ.

ರಾಮಲಿಂಗಾರೆಡ್ಡಿಗೆ ಲೋಕಸಭಾ ಚುನಾವಣೆಯಲ್ಲಿ ಆಸಕ್ತಿ ಇದ್ದಂತಿಲ್ಲ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಮಲಿಂಗಾರೆಡ್ಡಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗೃಹ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದರು. ಬಿಜೆಪಿಯಿಂದ ಸ್ಥಾನ ಕಿತ್ತುಕೊಳ್ಳಲು ಅವರೇ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ಅವರು ಲೋಕಸಭಾ ಚುನಾವಣೆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಇನ್ನೂ ಕೃಷ್ಣಪ್ಪ ತಮ್ಮ ಮಗನ ವಿಚಾರದಲ್ಲಿ ತೀರ್ಮಾನವನ್ನು ಪಕ್ಷದ ನಾಯಕರಿಗೆ ಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT