ಜಮೀರ್ ಅಹ್ಮದ್ ಖಾನ್ 
ರಾಜಕೀಯ

ರೆಡ್ಡಿ- ಬಿಎಸ್ ವೈ ಭೇಟಿ ಬೂಟಾಟಿಕೆ: ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ: ಜಮೀರ್

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತು ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ಅವರ ಭೇಟಿಯಿಂದ ಯಾವುದೇ ಅಚ್ಚರಿಯಾಗಿಲ್ಲ ಎಂದು ಆಹಾರ ಮತ್ತು ...

ಉಡುಪಿ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತು ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ಅವರ ಭೇಟಿಯಿಂದ ಯಾವುದೇ ಅಚ್ಚರಿಯಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಜೊತೆ ಬಿಜೆಪಿ ಸಂಬಂಧದ ಬಗ್ಗೆ ಲೇವಡಿಯಾಡಿದರು, ಕೆಟ್ಟ ಘಳಿಗೆ ಬಂದಾಗ ಯು ಟರ್ನ್ ಹೊಡೆಯುವುದು ಬಿಜೆಪಿಯವರಿಗೆ ಮಾಮೂಲಿ, ಬಿಜೆಪಿಯವರು ಚೆನ್ನಾಗಿದ್ದರೆ ಮಾತ್ರ ಜೊತೆಗಿರುತ್ತಾರೆ. ಹೆಚ್ಚು ಕಡಿಮೆ ಆದರೆ ಮಾತ್ರ ಬಿಟ್ಟು ಬಿಡುತ್ತಾರೆ ಎಂದು ಟೀಕಿಸಿದ್ದಾರೆ.
ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.​ಯಡಿಯೂರಪ್ಪ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನಾರ್ಧನ ರೆಡ್ಡಿ ಬಿಜೆಪಿಯಲ್ಲೇ ಇದ್ದಾರೆ. ಜನಾರ್ದನ ರೆಡ್ಡಿ ಅವರು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ.
ಬಿ ಎಸ್ ಯಡಿಯೂರಪ್ಪ ಕಳೆದ ಮೂರ್ನಾಲ್ಕು ತಿಂಗಳಿಂದ ಬಿಎಸ್​ವೈ ನಿದ್ದೆ ಮಾಡಿಲ್ಲ, ಮುಖ್ಯಮಂತ್ರಿ ಆದೆ ಎಂದು ಬಿಎಸ್​ವೈ ಕನಸು ಕಾಣುತ್ತಾರಂತೆ. ಕನಸು ಕಾಣುವುದು ತಪ್ಪಲ್ಲ. ಆದರೆ, ಎಲ್ಲರೂ ರಾತ್ರಿ ಕನಸು ಕಂಡರೆ ಬಿಎಸ್‌ವೈ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಮಮಂದಿರ ಕಟ್ಟಲು ಮುಸಲ್ಮಾನರ ವಿರೋಧ ಇಲ್ಲ. ಲೋಕಸಭಾ ಚುನಾವಣೆ ಬಂದರೆ ಬಿಜೆಪಿಯವರಿಗೆ ರಾಮಮಂದಿರ ನೆನಪಾಗುತ್ತದೆ. ನಾಲ್ಕೂವರೆ ವರ್ಷದಲ್ಲಿ ರಾಮಮಂದಿರ ಜ್ಞಾಪಕಕ್ಕೆ ಬಂದಿಲ್ಲ ಎಂದು ಹೇಳಿದರು.
ಇನ್ನೂ ರಾಜ್ಯದಲ್ಲಿರುವ ಅಸ್ತಿತ್ವದಲ್ಲಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ, ಮೈತ್ರಿ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಭರವಸೆ ವ್ಯಕ್ತ ಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT