ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ 
ರಾಜಕೀಯ

ಮುಖ್ಯಮಂತ್ರಿಗಳಿಗೆ ಸರ್ಕಾರ ನಡೆಸುವ ನೈತಿಕತೆಯಿಲ್ಲ: ಯಡಿಯೂರಪ್ಪ

ಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಅವರು ರಾಜೀನಾಮೆ ನೀಡುವ ತನಕ ಬಿಜೆಪಿ ಹೋರಾಟ ನಡೆಸಲಿದೆ' ಎಂದು ...

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಅವರು ರಾಜೀನಾಮೆ ನೀಡುವ ತನಕ ಬಿಜೆಪಿ ಹೋರಾಟ ನಡೆಸಲಿದೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ..
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದ ಸರ್ಕಾರ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು. ಬಡ್ಡಿ ರಹಿತ ಸಾಲ ನೀಡುವ 'ಬಡವರ ಬಂಧು' ಯೋಜನೆ ಬಗ್ಗೆ ಮಾಹಿತಿ ಇಲ್ಲಿದೆ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಬಿಜೆಪಿ ಮುಖಂಡ ರವಿ ಕುಮಾರ್, ಬಿಬಿಎಂಪಿ ಕಾರ್ಪೊರೇಟರ್‌ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
15 ದಿನದಲ್ಲಿ ಬಾಕಿ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ: ಎಚ್‌ಡಿಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅಂದರೆ ಡಿಸೆಂಬರ್ 10 ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. 
ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದಾದರೆ ಅವರು ಅಧಿಕಾರಲ್ಲಿ ಮುಂದುವರೆಯಬಾರದು. ಮುಖ್ಯಮಂತ್ರಿಗಳ ರಾಜೀನಾಮೆ ತನಕ ನಮ್ಮ ಹೋರಾಟ ಮುಂದುವರೆಯಲಿದೆ' ಎಂದು ಹೇಳಿದರು. ರಾಜೀನಾಮೆಗೆ ಒತ್ತಾಯಿಸಿ 'ರೈತ ಮಹಿಳೆ ಬಗ್ಗೆ ಆಡಿದ ಮಾತಿಗೆ ಕ್ಷಮೆ ಕೇಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಆಗಲಿಲ್ಲ. ಎಲ್ಲಾ ಸಹೋದರಿಯರಿಗೆ ಯಡಿಯೂರಪ್ಪ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT