ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ರಾಜಕೀಯ

ದಕ್ಷಿಣ ರಾಜ್ಯಗಳಲ್ಲಿ ಶಬರಿಮಲೆ ವಿವಾದವನ್ನು ಮುಖ್ಯ ವೇದಿಕೆಗೆ ತರಲು ಬಿಜೆಪಿ ಯತ್ನ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ಸಿದ್ದತೆಗಳು....

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ಸಿದ್ದತೆಗಳು ನಡೆಯುತ್ತಿರುವುದರ ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ಪ್ರತಿಭಟನೆಯನ್ನು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ವಿಸ್ತರಿಸಲು ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಮೊದಲ ಹಂತವಾಗಿ ಡಿಸೆಂಬರ್ 16ರಂದು ಕಾಸರಗೋಡು ಜಿಲ್ಲೆಯಲ್ಲಿ ಹಿಂದೂ ಸಮಾಜೋತ್ಸವ ರ್ಯಾಲಿ ಆಯೋಜಿಸಲಾಗಿದೆ. ಅಲ್ಲಿ ಯೋಗಿ ಆದಿತ್ಯನಾಥ ಅವರು ಉತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶಬರಿಮಲೆ ವಿವಾದ, ಪ್ರತಿಭಟನೆಯನ್ನು ದಕ್ಷಿಣದ ಬೇರೆ ರಾಜ್ಯಗಳಿಗೆ ವಿಸ್ತರಿಸಲು ಇದು ವೇದಿಕೆಯಾಗುವುದು ಮಾತ್ರವಲ್ಲದೆ ಮುಂದಿನ ಲೋಕಸಭೆ ಚುನಾವಣೆಗೆ ಕೇರಳ ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಶಬರಿಮಲೆ ವಿವಾದವನ್ನು ಕೂಡ ಬಿಜೆಪಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಈ ಹಿಂದೂ ಸಮಾಜೋತ್ಸವದಲ್ಲಿ ಕೇರಳದ ಹಿಂದೂಗಳು ಮಾತ್ರವಲ್ಲದೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಡಿಕೇರಿಯ ಹಿಂದೂ ಧರ್ಮೀಯರು ಕೂಡ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಶಬರಿಮಲೆ, ಲವ್ ಜಿಹಾದ್ ಮತ್ತು ಇತರ ವಿಷಯಗಳಲ್ಲಿ ಕೇರಳ ಸರ್ಕಾರ ಹಿಂದೂ ವಿರೋಧಿ ನಿಲುವು ತಳೆಯುತ್ತಿದೆ ಎಂದು ಹೇಳಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ರ್ಯಾಲಿ ಇದಾಗಲಿದೆ ಎಂದು ಮಂಗಳೂರು ವಿಭಾಗದ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಶರಣ್ ಪಂಪ್ ವೆಲ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT