ಜಗದೀಶ್ ಶೆಟ್ಟರ್ 
ರಾಜಕೀಯ

ಸತ್ತು ಹೋಗಿರೋ ಸರ್ಕಾರಕ್ಕೆ 'ವಿಶ್' ಮಾಡೋದು ಹೇಗೆ: ಜಗದೀಶ್ ಶೆಟ್ಟರ್ ಪ್ರಶ್ನೆ!

ರಾಜ್ಯ ಸಮ್ಮಿಶ್ರ ಸರ್ಕಾರ ಬಂದು ಆರು ತಿಂಗಳಾಗಿದೆ, ಆದರೆ ಸರ್ಕಾರವೇ ಅಸ್ತಿತ್ವದಲ್ಲಿಲ್ಲ, ಅದು ಸತ್ತು ಹೋಗಿದೆ. ಹೀಗಾದರೆ ವಿಷ್ ಮಾಡೋದಾದರೂ ಹೇಗೆ ಎಂದು ಮಾಜಿ....

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಬಂದು ಆರು ತಿಂಗಳಾಗಿದೆ, ಆದರೆ ಸರ್ಕಾರವೇ ಅಸ್ತಿತ್ವದಲ್ಲಿಲ್ಲ, ಅದು ಸತ್ತು ಹೋಗಿದೆ. ಹೀಗಾದರೆ ವಿಷ್ ಮಾಡೋದಾದರೂ ಹೇಗೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್ "ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುವುದೊಂದು, ಮಾಡುವುದೊಂದು.ಸರ್ಕಾರ ದಿವಾಳಿಯಾಗಿದೆ.ಇಂತಹಾ ಸನ್ನಿವೇಶದಲ್ಲಿ ಸರ್ಕಾರಕ್ಕೆ ವಿಷ್ ಮಾಡೋದಾದರೂ ಹೇಗೆ" ಎಂದಿದ್ದಾರೆ.
ಸರ್ಕಾರ ನಮ್ಮ ಫೋನ್ ಗಳನ್ನು ಟ್ರಾಪ್ ಮಾಡುತ್ತಿದೆ ಎನ್ನುವ ಕುರಿತಂತೆ ನನಗೆ ತಾಂತ್ರಿಕ ಜ್ಞಾನ ಇಲ್ಲ. ಆದರೆ ಒಮ್ಮೊಮ್ಮೆ ನಮ್ಮ ಫೋನ್ ಗಳಲ್ಲಿವಿಚಿತ್ರ ನಮೂನೆಯ ಸದ್ದು ಕೇಳಿಸುತ್ತದೆ.ಇನ್ನು ಸರ್ಕಾರಕ್ಕೆ ಟೀಕೆಗಳನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುವ ಬುದ್ದಿ ಇಲ್ಲ. ಪ್ರತಿಪಕ್ಷದವರಾದ ನಾವು ಸರ್ಕಾರದ ತಪ್ಪುಗಳನ್ನು ಎತ್ತಿ =ತೋರಿಸಿದಾಗ ಅದನ್ನು ವಿರೋಧಿಸುವ ಮನೋಭಾವವಿದೆ. ಟೀಕೆ ಮಾಡಲೇಬಾರದು ಎಂದರೆ ಹೇಗೆ>? ಶೆಟ್ಟರ್ ಪ್ರಶ್ನಿಸಿದ್ದಾರೆ.
ಈ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಇದರಲ್ಲೊಬ್ಬ ಸಕ್ಕರೆ ಸಚಿವರಿದ್ದಾರೆ ಎನ್ನುವುದು ತಿಳಿದೇ ಇರಲಿಲ್ಲ. ಹಾಗೊಂದು ವೇಳೆ ಕಬ್ಬು ಬೆಳೆಗಾಗ್ರರ ಸಮಸ್ಯೆ ಬಗೆಹರಿದದ್ದಾದರೆ ಅವರೇಕೆ ಬೀದಿಗಿಳಿದು ಹೋರಾಡುತ್ತಾರೆ? ಸರ್ಕಾರ ಎರಡು ತಿಂಗಳ ಹಿಂದೆಯೇ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಮಾತನಾಡಿಅಬೇಕಾಗಿತ್ತು ಎಂದು ಶೆಟ್ಟರ್ ಸರ್ಕಾರದ ಕಾರ್ಯವೈಖರಿ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ರೈತರಿಗೆ ಇನ್ನೂ ಋಣಮುಕ್ತ ಪತ್ರ ಸಿಕ್ಕಿಲ್ಲ ಎಂದು ಹೇಳಿದ ಶೆಟ್ಟರ್ ಸರ್ಕಾರ ಸಾಲಮನ್ನಾ ತಪ್ಪಿಸಲು ಸಬೂಬು ಹೇಳಿ ಜಾರಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT