ರಾಹುಲ್ ಗಾಂಧಿ - ಡಿಕೆ ಶಿವಕುಮಾರ್ 
ರಾಜಕೀಯ

`ಟ್ರಬಲ್ ಶೂಟರ್' ಡಿಕೆಶಿಗೆ ಹೊಸ ಜವಾಬ್ದಾರಿ ನೀಡಿದ ಹೈಕಮಾಂಡ್

ಇತ್ತೀಚಿಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ಹಾಗೂ ನಿನ್ನೆ ಬೆಳಗಾವಿಯಲ್ಲಿ ...

ಬೆಂಗಳೂರು: ಇತ್ತೀಚಿಗೆ ನಡೆದ ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ಹಾಗೂ ನಿನ್ನೆ ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಈಗ ಹೊಸ ಜವಾಬ್ದಾರಿಯೊಂದನ್ನು ನೀಡಿದೆ.
ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿಕೆಶಿ ನಿಜಕ್ಕೂ ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಆಗಿದ್ದು, ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅಪಸ್ವರಕ್ಕೆ ಅವಕಾಶ ನೀಡದಂತೆ ಉಭಯ ಪಕ್ಷಗಳ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೋಸ್ತಿ ಸರ್ಕಾರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. 
ಇತ್ತೀಚಿನ ದಿನಗಳಲ್ಲಿ `ಟ್ರಬಲ್ ಶೂಟರ್’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆಯುಂಟಾಗದಂತೆ ನೋಡಿಕೊಳ್ಳಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಉಭಯ ಪಕ್ಷಗಳ ಸಚಿವರು, ಶಾಸಕರಲ್ಲಿ ಅಸಮಾಧಾನವುಂಟಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೈಕಮಾಂಡ್ ಕಿವಿಮಾತು ಹೇಳಿದೆ.
ಡಿಕೆ ಶಿವಕುಮಾರ್ ಅವರು ತೆಂಲಗಾಣ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ಆಗಮಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಡಿಕೆಶಿಗೆ ಈ ಸಲಹೆ ನೀಡಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT