ಸಂತೋಷ್ , ಆರ್ .ಅಶೋಕ್ ಮತ್ತು ಯಡಿಯೂರಪ್ಪ 
ರಾಜಕೀಯ

ಮೇಯರ್ ಚುನಾವಣೆ ಸೋಲು: ಅಶೋಕ್ ಗೆ ಸಂತೋಷ್ ತಪರಾಕಿ: ಮಾಜಿ ಡಿಸಿಎಂ ಪರ ಬಿಎಸ್ ವೈ ಬ್ಯಾಟಿಂಗ್

ರಾಜ್ಯ ಬಿಜೆಪಿ ಅಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನಡುವಿನ ಶೀತಲ ಸಮರಕ್ಕೆ ....

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನಡುವಿನ ಶೀತಲ ಸಮರಕ್ಕೆ ಬಿಬಿಎಂಪಿ ಮೇಯರ್ ಚುನಾವಣೆ ವೇದಿಕೆಯಾಗಿ ಮಾರ್ಪಟ್ಟಿದೆ. 
ಮಾಜಿ ಡಿಎಸಿಎಂ ಆರ್ . ಅಶೋಕ್ ವಿರುದ್ಧ ಸಾಮಾಜಿಜ ಜಾಲತಾಣ ಫೇಸ್ ಬುಕ್ ನಲ್ಲಿ ಸಂತೋಷ್ ಕಿಡಿಕಾರಿದ್ದಾರೆ. ತಂಡದ ಸ್ಪೂರ್ತಿ ಇಲ್ಲದವರು, ಗೆಲುವಿನ ಕೀರ್ತಿಯನ್ನು ಹಂಚಿಕೊಳ್ಳದವರು ಗೆಲುವು ಸಾಧಿಸಲಾರರು ಎಂದು ಅಶೋಕ್ ವಿರುದ್ಧ ಸಂತೋಷ್ ಪರೋಕ್ಷವಾಗಿ ಕಿಡಿಕಾರಿದ್ದರು
ಬಿಬಿಎಂಪಿ ಮೇಯರ್​​-ಉಪಮೇಯರ್​ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ಪಕ್ಷದ ವೈಫಲ್ಯ ಕಾರಣ ಹೊರತು, ಯಾರನ್ನು ದೂರುವ ಅಗತ್ಯವಿಲ್ಲ. ಆರ್.ಅಶೋಕ್ ಅವರು ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಪ್ರಯತ್ನಿಸಿದ್ಧಾರೆ. ಕೊನೆ ಘಳಿಗೆಯಲ್ಲಿ ಅನಂತ್ ಕುಮಾರ್ ಮತ್ತು ನಿರ್ಮಲಾ ಸೀತರಾಮನ್  ಇಲ್ಲದ ಕಾರಣ ನಾವು ಸೋಲಬೇಕಾಯಿತು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​ ಯಡಿಯೂರಪ್ಪ ಅವರು ಸಮರ್ಥಿಸಿಕೊಂಡಿದ್ದಾರೆ.
ಅನಗತ್ಯವಾಗಿ ಟೀಕಿಸುವುದು ಸರಿಯಲ್ಲ. ಅಶೋಕ್ ಮೇಲೆ ಕೆಲವರು ಸುಮ್ಮನೆ ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT